ಕಾಂಗ್ರೆಸ್ ಬಾಗಿಲು ತಟ್ಟುತ್ತಿದ್ದಾರೆ 9 ಬಿಜೆಪಿ ಶಾಸಕರು : ಜಮೀರ್ ನೀಡಿದ ಸುಳಿವು

Published : May 12, 2019, 01:51 PM IST
ಕಾಂಗ್ರೆಸ್ ಬಾಗಿಲು ತಟ್ಟುತ್ತಿದ್ದಾರೆ 9 ಬಿಜೆಪಿ ಶಾಸಕರು : ಜಮೀರ್ ನೀಡಿದ ಸುಳಿವು

ಸಾರಾಂಶ

ಲೋಕಸಭಾ ಚುನಾವಣೆ ಮುಕ್ತಾಯವಾಗಿದೆ. ಇತ್ತ ಸರ್ಕಾರ ಪತನದ ವಿಚಾರ ಸದ್ದು ಮಾಡುತ್ತಿದೆ. ಕೈ ಮುಖಂಡರು ಬಿಜೆಪಿಗರು ನಮ್ಮ ಬಳಿ ಇದ್ದಾರೆ ಎಂದರೆ, ಅತ್ತ ಬಿಜೆಪಿಗರು ಕಾಂಗ್ರೆಸಿನವರು ನಮ್ಮ ಬೆಂಬಲಕ್ಕೆ ನಿಲ್ಲುತ್ತಿದ್ದಾರೆ ಎನ್ನುತ್ತಿದ್ದಾರೆ.

ಹುಬ್ಬಳ್ಳಿ:  ರಾಜ್ಯ ರಾಜಕೀಯದಲ್ಲಿ ಹಲವು ರೀತಿಯ ಚರ್ಚೆಗಳಾಗುತ್ತಿದೆ. ಅತ್ತ ಬಿಜೆಪಿ ಮುಖಂಡರು ಕೈ ನಾಯಕರು ತಮ್ಮ ಸಂಪರ್ಕದಲ್ಲಿದ್ದಾರೆ ಎಂದರೆ ಇತ್ತ ಕೈ ಮುಖಂಡರೂ ಕೂಡ ಬಿಜೆಪಿಯವರು ನಮ್ಮ ಬಾಗಿಲು ತಟ್ಟುತ್ತಿದ್ದಾರೆ ಎನ್ನುತ್ತಿದ್ದಾರೆ. 

ಕೈ ಮುಖಂಡ ಇದೀಗ ಜಮೀರ್ ಅಹಮದ್ 9 ಮಂದಿ ಬಿಜೆಪಿ ಶಾಸಕರು ನಮ್ಮೊಂದಿಗಿದ್ದಾರೆ ಎಂದು ಹೇಳಿದ್ದಾರೆ. ಕಾಂಗ್ರಸ್ ಬಿಟ್ಟು ಬಿಜೆಪಿಗೆ ಹೋಗಿದ್ದ ಅವರು ಇದೀಗ ಮತ್ತೆ ಮರಳಿ ಬರುವುದಾಗಿ ನಮ್ಮ ಬಳಿ ಬಂದಿದ್ದಾರೆ. ಆದರೆ ಯಾವುದೇ ಕಾರಣಕ್ಕೂ ನಾವು ಅವರನ್ನು ಮರಳಿ ಕರೆಸಿಕೊಳ್ಳುವುದಿಲ್ಲ ಎನ್ನುವ ಸ್ಫೋಟಕ ಮಾಹಿತಿ ನೀಡಿದ್ದಾರೆ. 

ಐದು ವರ್ಷ ಎಚ್.ಡಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿರಲಿದ್ದಾರೆ.  2023ರಲ್ಲಿ ಸಿದ್ದರಾಮಯ್ಯ ಅವರನ್ನು ಸಿಎಂ ಮಾಡುತ್ತೇವೆ ಎಂದರು. 

ಇನ್ನು ಬಿಜೆಪಿ ನಾಯಕ ಯಡಿಯೂರಪ್ಪಮುಖ್ಯಮಂತ್ರಿಯಾಗುವ ಕನಸು ಕಾಣುತ್ತಾ ಮಧ್ಯರಾತ್ರಿ ಎದ್ದು ಕೂರುತಿದ್ದಾರೆ. ಮೇ 23 ಅಲ್ಲ. ಮೇ 25ರವರೆಗೂ ಟೈಮ್ ನೀಡುತ್ತೇವೆ. ಬಿಜೆಪಿ ಅಧಿಕಾರಕ್ಕೆ ಬಂದಲ್ಲಿ ನಾನು ರಾಜಕೀಯ ನಿವೃತ್ತಿಯನ್ನೇ ಪಡೆಯುತ್ತೇನೆ ಎಂದು ಸವಾಲು ಹಾಕಿದ್ದಾರೆ.  ಇಲ್ಲವಾದಲ್ಲಿ ಯಡಿಯೂರಪ್ಪ ನಿವೃತ್ತಿ ಹೊಂದುತ್ತಾರಾ ಎಂದು ಓಪನ್ ಚಾಲೇಂಜ್ ಮಾಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೊಪ್ಪಳದಲ್ಲಿ ಭೀಕರ ಅಪಘಾತ, ಬೈಕ್‌ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು
ವನ್ಯಜೀವಿ-ಮಾನವ ಸಂಘರ್ಷ ಶಾಶ್ವತ ಪರಿಹಾರಕ್ಕೆ ಕ್ರಮ: ಸಚಿವ ಈಶ್ವರ್‌ ಖಂಡ್ರೆ