
ನವದೆಹಲಿ(ಏ.29): ಭಾರತದಲ್ಲಿ ನೋಂದಾಯಿತ 9 ಲಕ್ಷ ಕಂಪನಿಗಳು ವಾರ್ಷಿಕ ತೆರಿಗೆ ರಿಟರ್ನ್ಗಳನ್ನು ಕಂಪನಿ ವ್ಯವಹಾರಗಳ ಸಚಿವಾಲಯಕ್ಕೆ ಸಲ್ಲಿಸಿಲ್ಲ. ಅವು ಅಕ್ರಮವಾಗಿ ಹಣ ವರ್ಗಾಯಿಸಿರುವ ಸಾಧ್ಯತೆ ಇದೆ ಎಂದು ಆದಾಯ ಕಾರ್ಯದರ್ಶಿ ಹಂಸಮುಖ ಅಯಾ ತಿಳಿಸಿದ್ದಾರೆ.
ನೋಂದಣಿಯನ್ನು ರದ್ದುಗೊಳಿಸಿಕೊಳ್ಳುವಂತೆ ಕಂಪನಿಗಳ ವ್ಯವಹಾರಗಳ ಸಚಿವಾಲಯ ನೋಟಿಸ್ ನೀಡಿದೆ. 15 ಲಕ್ಷ ಕಂಪನಿಗಳ ಪೈಕಿ 6 ಲಕ್ಷ ಕಂಪನಿಗಳು ಮಾತ್ರ ಆದಾಯ ತೆರಿಗೆ ರಿಟರ್ನ್ಗಳನ್ನು ಪಾವತಿಸಿವೆ. 8-9 ಕಂಪನಿಗಳು ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸದೇ ಇರುವುದು ಸಂಭಾವ್ಯ ಬೆದರಿಕೆ ಮತ್ತು ಹಣವನ್ನು ಅಕ್ರಮವಾಗಿ ವರ್ಗಾಯಿಸಿರುವ ಸಾಧ್ಯತೆ ಇದೆ. ಹೀಗಾಗಿ ಈ ಕಂಪನಿಗಳು ಭಾರತದಲ್ಲಿ ಕಾರ್ಯನಿರ್ವಹಿಸುವುದು ನಮಗೆ ಬೇಕಾಗಿಲ್ಲ. ಈ ಕುರಿತು ತನಿಖೆ ನಡೆಸಲು ಕಾರ್ಯಪಡೆಯೊಂದನ್ನು ರಚಿಸಲಾಗುವುದು ಎಂದು ಅಯಾ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.