
ನವದೆಹಲಿ(ಸೆ.04): ರೈಲ್ವೆಗೆ ನೂತನ ಸಚಿವರಾಗಿ ಪೀಯೂಷ್ ಗೋಯೆಲ್ ನೇಮಕದೊಂದಿಗೆ, ರೈಲ್ವೆ ಕಳೆದ 9 ವರ್ಷಗಳಲ್ಲಿ 9ನೇ ಸಚಿವರನ್ನು ಕಾಣುವಂತಾಗಿದೆ. ಕಳೆದ ಹತ್ತು ವರ್ಷಗಳಲ್ಲಿ ಕೆಲವರು ರೈಲುಗಳ ಅಪಘಾತ, ಭ್ರಷ್ಟಾಚಾರ ಆರೋಪಗಳಿಗಾಗಿ ರೈಲ್ವೆ ಖಾತೆಗೆ ರಾಜೀನಾಮೆ ನೀಡಿದ್ದು, ಮತ್ತೆ ಕೆಲವರು ತಮ್ಮ ರಾಜಕೀಯ ಆಕಾಂಕ್ಷೆಗಳ ಈಡೇರಿಕೆಗಾಗಿ ರೈಲ್ವೆ ಸಚಿವ ಸ್ಥಾನವನ್ನು ಬಿಟ್ಟುಕೊಟ್ಟಿದ್ದರು. 2009ರಿಂದ 2017ರ ಅವಧಿಯಲ್ಲಿ ರೈಲ್ವೆ ಸಚಿವರ ಹುದ್ದೆಯನ್ನು ನಿರ್ವಹಿಸಿದವರೆಂದರೆ, ಮಮತಾ ಬ್ಯಾನರ್ಜಿ, ದಿನೇಶ್ ತ್ರಿವೇದಿ, ಮುಕುಲ್ ರಾಯ್, ಸಿ.ಪಿ.ಜೋಷಿ, ಪವನ್ ಕುಮಾನ್ ಬನ್ಸಲ್, ಮಲ್ಲಿಕಾರ್ಜುನ ಖರ್ಗೆ, ಡಿ.ವಿ.ಸದಾನಂದಗೌಡ, ಸುರೇಶ್ ಪ್ರಭು ಮತ್ತು ಇದೀಗ ಪೀಯೂಷ್ ಗೋಯೆಲ್.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.