22ರಿಂದ 29ರವರೆಗೆ 9 ರೈಲು ಸಂಚಾರ ರದ್ದು

Published : May 18, 2019, 08:15 AM IST
22ರಿಂದ 29ರವರೆಗೆ 9 ರೈಲು ಸಂಚಾರ ರದ್ದು

ಸಾರಾಂಶ

ರಾಜ್ಯದಲ್ಲಿ ಒಟ್ಟು 9 ರೈಲುಗಳ ಸಂಚಾರ ರದ್ದುಗೊಳ್ಳುತ್ತಿದೆ. ಕಾರಣವೇನು..?

ಬೆಂಗಳೂರು :  ತುಮಕೂರು- ಮಲ್ಲಸಂದ್ರ- ಗುಬ್ಬಿ ಮಾರ್ಗದಲ್ಲಿ ರೈಲ್ವೆ ಹಳಿ ಕಾಮಗಾರಿ ಹಿನ್ನೆಲೆಯಲ್ಲಿ ಮೇ 22ರಿಂದ 29ರ ವರೆಗೆ ಬೆಂಗಳೂರು ವಿಭಾಗದಿಂದ ಸಂಚರಿಸುವ 9 ರೈಲು ಸಂಚಾರ ರದ್ದುಪಡಿಸಲು ತೀರ್ಮಾನಿಸಲಾಗಿದೆ ಎಂದು ನೈಋುತ್ಯ ರೈಲ್ವೆ ಪ್ರಕಟಣೆ ತಿಳಿಸಿದೆ.

ಬೆಂಗಳೂರು ಕೆಎಸ್‌ಆರ್‌- ಶಿವಮೊಗ್ಗ ಟೌನ್‌ ಪ್ಯಾಸೆಂಜರ್‌ ರೈಲು ಮೇ 22ರಿಂದ 29ರ ವರೆಗೆ, ಶಿವಮೊಗ್ಗ ಟೌನ್‌- ಕೆಎಸ್‌ಆರ್‌ ಬೆಂಗಳೂರು ಪ್ಯಾಸೆಂಜರ್‌ ರೈಲು ಮೇ 23ರಿಂದ 29 ರವರೆಗೆ, ಹರಿಹರ- ಯಶವಂತಪುರ ಎಕ್ಸ್‌ಪ್ರೆಸ್‌ ರೈಲು ಸಂಚಾರ ಮೇ 23, 24 ಹಾಗೂ 29ರಂದು ರದ್ದುಗೊಳಿಸಲಾಗಿದೆ. ಯಶವಂತಪುರ- ಹರಿಹರ ಎಕ್ಸ್‌ಪ್ರೆಸ್‌ ರೈಲು ಮೇ 22, 23 ಹಾಗೂ 28, ಕೆಎಸ್‌ಆರ್‌ ಬೆಂಗಳೂರು- ತಾಳಗುಪ್ಪ ಎಕ್ಸ್‌ಪ್ರೆಸ್‌ ರೈಲು ಮೇ 22ರಿಂದ 28ರವರೆಗೆ, ತಾಳಗುಪ್ಪ- ಕೆಎಸ್‌ಆರ್‌ ಬೆಂಗಳೂರು ಎಕ್ಸ್‌ಪ್ರೆಸ್‌ ರೈಲು ಮೇ 23ರಿಂದ 29ರ ವರೆಗೆ, ಯಶವಂತಪುರ- ಶಿವಮೊಗ್ಗ ಟೌನ್‌ ಎಕ್ಸ್‌ಪ್ರೆಸ್‌ ಮೇ 25, 26 ಹಾಗೂ 27ರಂದು, ಶಿವಮೊಗ್ಗ ಟೌನ್‌- ಯಶವಂತಪುರ ಎಕ್ಸ್‌ಪ್ರೆಸ್‌ ರೈಲು ಮೇ 25, 26 ಹಾಗೂ 27ರಂದು ಮತ್ತು ಕೆಎಸ್‌ಆರ್‌ ಬೆಂಗಳೂರು/ ಚಿಕ್ಕಜಾಜೂರು- ಚಿತ್ರದುರ್ಗ ಪ್ಯಾಸೆಂಜರ್‌ ರೈಲು ಮೇ 23ರಿಂದ 29 ರವರೆಗೆ ಸಂಚಾರ ರದ್ದುಗೊಳಿಸಲಾಗಿದೆ ಎಂದು ನೈಋುತ್ಯ ರೈಲ್ವೆ ತಿಳಿಸಿದೆ.

ಗೆದ್ದವರಾರು? ಬಿದ್ದವರಾರು ? ಮಹಾಸಂಗ್ರಾಮದ ಮಹಾಫಲಿತಾಂಶ. ಗುರುವಾರ 23 ಮೇ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Bengaluru: ಫ್ರೀಡಂ ಪಾರ್ಕ್‌ನಲ್ಲಿ ಕೈಗೆ ಕೋಳ ಹಾಕಿಕೊಂಡು 'STOP killing Men' ಪ್ರತಿಭಟನೆ ಮಾಡಿದ ಪುರುಷರು!
ಅಫೀಸ್‌ ಸಮಯ ಬಳಿಕ ಕರೆ-ಇಮೇಲ್ ಮಾಡಂಗಿಲ್ಲ, ಡಿಸ್‌ಕನೆಕ್ಟ್ ಬಿಲ್ ಲೋಕಸಭೆಯಲ್ಲಿ ಮಂಡನೆ