
ಬೆಂಗಳೂರು : ಮೃತಪಟ್ಟ ಭಿಕ್ಷುಕನ ಆತನ ಬಳಿ .96 ಸಾವಿರ ಪತ್ತೆಯಾದ ಘಟನೆ ಬೆಂಗಳೂರಿನ ಕಂಟೋನ್ಮೆಂಟ್ ರೈಲ್ವೆ ನಿಲ್ದಾಣದ ಬಳಿ ನಡೆದಿದೆ. ಮೃತರನ್ನು ಷರೀಫ್ (70) ಎಂದು ಗುರುತಿಸಲಾಗಿದೆ. ಷರೀಫ್ 12 ವರ್ಷಗಳಿಂದ ಕಂಟೋನ್ಮೆಂಟ್ ರೈಲ್ವೆ ನಿಲ್ದಾಣದ ಬಳಿ ಭಿಕ್ಷೆ ಬೇಡಿ ಜೀವನ ಸಾಗಿಸುತ್ತಿದ್ದರು.
ಕಳೆದ ಐದು ವರ್ಷಗಳಿಂದ ಷರೀಫ್ರಿಗೆ ಗ್ಯಾಂಗ್ರಿನ್ ಆಗಿದ್ದರಿಂದ ಕಾಲೊಂದನ್ನು ಕತ್ತರಿಸಿ ಕೃತಕ ಕಾಲು ಅಳವಡಿಸಲಾಗಿತ್ತು. ಮಂಗಳವಾರ ಬೆಳಗ್ಗೆ 10ರ ಸುಮಾರಿಗೆ ಷರೀಫ್ ರೈಲ್ವೆ ನಿಲ್ದಾಣದ ಬಳಿ ಮೂತ್ರ ಮಾಡಲು ತೆರಳಿ ವೇಳೆ ಸಾವನ್ನಪ್ಪಿದ್ದಾರೆ. ಈ ವೇಳೆ ಷರೀಫ್ ಅವರ ಕೃತಕ ಪ್ಲಾಸ್ಟಿಕ್ ಕಾಲಿನಲ್ಲಿ 500, 100, 50 ಹಾಗೂ 20 ಮುಖ ಬೆಲೆಯ ಒಟ್ಟು .96,700 ಹಣ ಪತ್ತೆಯಾಗಿದೆ.
ಮೃತರು ಭಿಕ್ಷೆ ಬೇಡಿ ಕೊಟ್ಟಿರುವ ಹಣ ಎಂದು ತಿಳಿದು ಬಂದಿದೆ. ಕುಟುಂಬಸ್ಥರು ಯಾರು ಇಲ್ಲದ ಕಾರಣ ಹಣವನ್ನು ಜಪ್ತಿ ಮಾಡಲಾಗಿದ್ದು, ಸಹಜವಾಗಿ ಮೃತಪಟ್ಟಿದ್ದಾರೆಂದು ಮೇಲ್ನೋಟಕ್ಕೆ ತಿಳಿದು ಬಂದಿದೆ. ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಹೈಗ್ರೌಂಡ್ಸ್ ಠಾಣೆ ಪೊಲೀಸರು ಮಾಹಿತಿ ನೀಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.