ಇಸ್ರೇಲ್ ಮಾದರಿ ಕೃಷಿಪದ್ಧತಿ ಜಾರಿಗೆ ಮಂಡ್ಯದಲ್ಲಿ 900 ಎಕರೆ ಭೂಮಿ

Published : Jun 02, 2018, 09:52 PM ISTUpdated : Jun 02, 2018, 09:54 PM IST
ಇಸ್ರೇಲ್ ಮಾದರಿ ಕೃಷಿಪದ್ಧತಿ ಜಾರಿಗೆ ಮಂಡ್ಯದಲ್ಲಿ 900 ಎಕರೆ ಭೂಮಿ

ಸಾರಾಂಶ

ರಾಜ್ಯದಲ್ಲಿ ಇಸ್ರೇಲ್ ಮಾದರಿ ಕೃಷಿಪದ್ಧತಿ ಜಾರಿಗೆ ಮಂಡ್ಯದಲ್ಲಿ ಪೈಲೆಟ್ ಪ್ರಾಜೆಕ್ಟ್  ಇಸ್ರೇಲ್‌ನಿಂದ ಪರಿಣತರನ್ನು ಕರೆಸಿ ಅಗತ್ಯ ಮಾಹಿತಿ ಮತ್ತು ತರಬೇತಿ 

ಬೆಂಗಳೂರು: ರಾಜ್ಯದಲ್ಲಿ ಇಸ್ರೇಲ್ ಮಾದರಿ ಕೃಷಿಪದ್ಧತಿ ಜಾರಿಗೆ ಮಂಡ್ಯದಲ್ಲಿ 900 ಎಕರೆ ಭೂಮಿಯನ್ನು ಗೊತ್ತುಪಡಿಸಲಾಗಿದೆ ಎಂದು ಸಿಎಂ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಮಂಡ್ಯದ ಈ ಯೋಜನೆ ಪೈಲೆಟ್ ಪ್ರಾಜೆಕ್ಟ್ ಆಗಿದ್ದು, ಇಸ್ರೇಲ್ನಿಂದ ಪರಿಣತರನ್ನು ಕರೆಸಿ ಅಗತ್ಯ ಮಾಹಿತಿ ಮತ್ತು ತರಬೇತಿಯನ್ನು ಕೊಡಿಸಲು ಉದ್ದೇಶಿಸಿರುವುದಾಗಿ ಸಿಎಂ ತಿಳಿಸಿದ್ದಾರೆ.

ರಾಜ್ಯದಲ್ಲಿ ಮಳೆಗಾಲಕ್ಕೆ ಮುನ್ನವೇ ಶೇ.51 ರಷ್ಟು ಹೆಚ್ಚುಮಳೆಯಾಗಿದೆ. ಇನ್ನೂ ಮೂರು ದಿನ ಉತ್ತಮ ಮಳೆಯಾಗಲಿದೆ. ಕೃಷಿಚಟುವಟಿಕೆ ಭರದಿಂದ ಸಾಗಿದೆ. ರೈತರಿಗೆ ಭಿತ್ತನೆ ಬೀಜ, ರಾಸಾನಿಕಗಳ ಪೂರೈಕೆಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ, ಎಂದು ಅವರು ತಿಳಿಸಿದ್ದಾರೆ.

ಕಳಪೆ ಗುಣಮಟ್ಟದ ಭಿತ್ತನೆ ಬೀಜ, ರಾಸಾನಿಕಗಳ ಪೂರೈಕೆ ಮಾಡುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು. ತಪ್ಪು ಮಾಡಿದವರು ಯಾರೇ ಆದರೂ ಅಂಥವರ ವಿರುದ್ಧ ಕ್ರಮಕ್ಕೆ ಸೂಚನೆ ನೀಡಿದ್ದೇನೆ. ಈ ಬಗ್ಗೆ ಸರ್ಕಾರದ ಮುಖ್ಯಕಾರ್ಯದರ್ಶಿಯವರಿಗೆ ಆದೇಶ ಕೊಟ್ಟಿದ್ದೇನೆ, ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

ಇಸ್ರೇಲ್ ದೇಶದಲ್ಲಿ ಕೃಷಿಯ ವಿನೂತನ ರೀತಿಗಳನ್ನು ಅಧ್ಯಯನ ನಡೆಸಲು ಕಳೆದ ವರ್ಷ ಆಗಸ್ಟ್‌ನಲ್ಲಿ ಕುಮಾರಸ್ವಾಮಿ ನಿಯೋಗ ಇಸ್ರೇಲ್‌ಗೆ ಭೇಟಿ ನೀಡಿತ್ತು. ಪುಟ್ಟ ರಾಷ್ಟ್ರವಾಗಿರುವ ಇಸ್ರೇಲ್ ಕೃಷಿ ಕ್ಷೇತ್ರದಲ್ಲಿ ಅಭೂತಪೂರ್ವ ಸಾಧನೆ ಮಾಡಿದ್ದು, ಅಲ್ಲಿನ ಆಧುನಿಕ  ಹನಿ ಮತ್ತು ಸೂಕ್ಷ್ಮ ನೀರಾವರಿಯ ವ್ಯವಸ್ಥೆಯು ಬರಪೀಡಿತ ಪ್ರದೇಶಗಳಲ್ಲಿ ಅನುಕೂಲಕರವಾಗಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಿಕೆಶಿ ಸಿಎಂ ಆದ್ರೆ ಅವರ ಸಂಪುಟದಲ್ಲಿ ನಾನು ಸಚಿವ ಆಗೋಲ್ಲ: ಕೆಎನ್ ರಾಜಣ್ಣ ದೊಡ್ಡ ನಿರ್ಧಾರ!
ಅನುದಾನ ಬೇಕಾದ್ರೆ ನಾಟಿ ಕೋಳಿ ಅಡುಗೆ ಮಾಡಬೇಕಾ? ರಾಜ್ಯ ಸರ್ಕಾರಕ್ಕೆ ಸಿ.ಟಿ.ರವಿ ಪ್ರಶ್ನೆ