ಭಾರೀ ಭೂಕಂಪದಲ್ಲಿ 90 ಸಾವು : ಮತ್ತೆ ಸುನಾಮಿ ಎಚ್ಚರಿಕೆ

Published : Aug 06, 2018, 01:46 PM ISTUpdated : Aug 06, 2018, 01:56 PM IST
ಭಾರೀ ಭೂಕಂಪದಲ್ಲಿ 90 ಸಾವು : ಮತ್ತೆ ಸುನಾಮಿ ಎಚ್ಚರಿಕೆ

ಸಾರಾಂಶ

ಭಾರಿ ಭೂಕಂಪನದಿಂದ 91 ಮಂದಿ ಪ್ರಾಣ ಕಳೆದುಕೊಂಡಿದ್ದು, ಹಲವು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅಲ್ಲದೇ ಸಮುದ್ರದಲ್ಲಿ ಭಾರೀ ಅಲೆಗಳು ಏಳುತ್ತಿದ್ದು ಸುನಾಮಿ ಸಂಭವಿಸಬಹುದಾದ ಮುನ್ನೆಚ್ಚರಿಕೆ ನೀಡಲಾಗಿದೆ. 

ಜಾರ್ಖಂಡ್ : ಇಂಡೋನೇಷಿಯಾದಲ್ಲಿ ಸಂಭವಿಸಿದ ಭಾರೀ ಭೂಕಂಪದಿಂದ  91 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಭಾನುವಾರ ರಾತ್ರಿ 9.1ರ ತೀವ್ರತೆಯಲ್ಲಿ ಭೂ ಕಂಪನ ಸಂಭವಿಸಿದ್ದು  ಇದರಿಂದ 200ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಯು ರಭಸದಿಂದ ಸಾಗಿದೆ. 

ಭೀಕರ ಭೂಕಂಪನದಿಂದ ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ. ಸುಟೋಪೊಪೂರ್ವಿ ನಗ್ರೋಹೋ ಪ್ರದೇಶದಲ್ಲಿ ಭೂ ಕಂಪನದ ಕೇಂದ್ರ ಬಿಂದು ಇರುವುದಾಗಿ ನೈಸರ್ಗಿಕ ವಿಕೋಪ ತಡೆ ಸಮಿತಿ ಹೇಳಿದೆ. 

ಅಲ್ಲದೇ ಸಮುದ್ರದ ಅಲೆಗಳು ಭಾರೀ ರಭಸದಿಂಧ ಅಪ್ಪಳಿಸುತ್ತಿದ್ದು  ಇನ್ನಷ್ಟು ಅನಾಹುತ ಸೃಷ್ಟಿಯಾಗಬಹುದಾದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಸಮುದ್ರದಂಚಿನ ನಿವಾಸಿಗಳನ್ನು ಸ್ಥಳಾಂತರ ಮಾಡಲಾಗಿದೆ.  ಅಲ್ಲದೇ ಭಾರಿ ಸುನಾಮಿ ಸಂಭವಿಸುವ ಬಗ್ಗೆಯೂ ಕೂಡ ಎಚ್ಚರಿಕೆ ನೀಡಲಾಗಿದೆ. 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧಿಸಿ: ಸಿಎಂಗೆ ಮಹಿಳಾ ಆಯೋಗ ಮನವಿ
ಬಿಪಿಎಲ್ ಕಾರ್ಡ್‌ನ 2.95 ಲಕ್ಷ ಅರ್ಜಿ ವಿಲೇವಾರಿ: ಮುನಿಯಪ್ಪ