
ನವದೆಹಲಿ(ಫೆ.08): ಆಂತರಿಕ ಕಲಹ, ನೈಸರ್ಗಿಕ ವಿಕೋಪಗಳು, ಯುದ್ಧ ಪೀಡಿತ ಮತ್ತು ಆರ್ಥಿಕ ಹಿಂಜರಿಕೆಯ ರಾಷ್ಟ್ರಗಳಿಂದ ಎರಡು ವರ್ಷಗಳಲ್ಲಿ 95,665 ಭಾರತೀಯರನ್ನು ಸುರಕ್ಷಿತವಾಗಿ ವಾಪಸ್ ಕರೆತರಲಾಗಿದೆ ಎಂದು ಲೋಕಸಭೆಗೆ ವಿದೇಶಾಂಗ ಖಾತೆ ಸಹಾಯಕ ಸಚಿವ ವಿ.ಕೆ.ಸಿಂಗ್ ತಿಳಿಸಿದ್ದಾರೆ. ಲೋಕಸಭೆಯ ಕಲಾಪದಲ್ಲಿ ಬುಧವಾರ ಮಾತನಾಡಿದ ಸಚಿವ ಸಿಂಗ್, ವಿದೇಶದಲ್ಲಿರುವ ಭಾರತೀಯರ ಸುರಕ್ಷತೆ ಬಗ್ಗೆ ಸರ್ಕಾರ ಹೆಚ್ಚಿನ ಕಾಳಜಿ ವಹಿಸಿರುವ ಬಗ್ಗೆ ಭರವಸೆ ನೀಡಿದರು. ವಿದೇಶದಲ್ಲಿರುವ 1,23,098 ಭಾರತೀಯರು ಸರ್ಕಾರದ ಬೆಂಬಲ ಕೋರಿದ್ದರು. ಇದರಲ್ಲಿ ಎರಡು ವರ್ಷಗಳಲ್ಲಿ 95,665 ಮಂದಿಯನ್ನು ವಾಪಸ್ ಕರೆತರಲಾಗಿದೆ ಎಂಬ ಭಾರತೀಯ ದೂತವಾಸ ಕಚೇರಿಗಳ ಮಾಹಿತಿಯನ್ನು ಸಚಿವರು ನೀಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.