
ಲಖನೌ(ಡಿ.9): ಹಿಂಸಾಚಾರ, ಗಲಭೆ ನಡೆಯುವ ಸಾಧ್ಯತೆ ಇದ್ದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಕೆಲವೊಂದು ಪ್ರದೇಶ ಗಳಲ್ಲಿ ಪೊಲೀಸರು ನಿಷೇಧಾಜ್ಞೆ ಜಾರಿಗೊಳಿಸುವುದು ಸಾಮಾನ್ಯ. ಆದರೆ ಉತ್ತರಪ್ರದೇಶದಲ್ಲಿ ಸರ್ಕಾರಿ ಕಚೇರಿಯೊಳಗೆ ನಿಷೇಧಾಜ್ಞೆ ಹೇರಿರುವ ಅಚ್ಚರಿ ಘಟನೆ ನಡೆದಿದೆ.
ಲಖನೌನಲ್ಲಿರುವ ಕಂದಾಯ ಇಲಾಖೆ ಕಳೆದ ಕೆಲ ತಿಂಗಳಿನಿಂದ ರಾಜಕಾರಣಿಗಳು, ಪ್ರಭಾವಿಗಳು, ಭಾರೀ ಶ್ರೀಮಂತರು ಒತ್ತುವರಿ ಮಾಡಿಕೊಂಡಿದ್ದ 100 ಕೋಟಿ ರು.ಗೂ ಹೆಚ್ಚಿನ ಮೊತ್ತದ ಭೂಮಿಯನ್ನು ವಶಪಡಿಸಿಕೊಂಡಿದೆ. ಈ ಹಿನ್ನೆಲೆ, ಸ್ಥಳೀಯ ಪ್ರಭಾವಿಗಳು ಕಂದಾಯ ಇಲಾಖೆ ಅಧಿಕಾರಿಗಳಿಗೆ ಬೆದರಿಕೆ ಹಾಕುತ್ತಿದ್ದರು.
ಸ್ವತಃ ಕಂದಾಯ ಇಲಾಖೆ ಕಾರ್ಯದರ್ಶಿ ರಜನೀಶ್ ದುಬೇಗೂ ಇಂಥ ಬೆದರಿಕೆ ಹಾಕಿದ್ದರು. ಹೀಗಾಗಿ ಅಧಿಕಾರಿಗಳ ರಕ್ಷಣೆ ಮತ್ತು ಯಾವುದೇ ಅನಾಹುತಕಾರಿ ಘಟನೆ ನಡೆಯದಂತೆ ತಡೆಯಲು ಲಖನೌದ ಕಂದಾಯ ಇಲಾಖೆ ಆಯುಕ್ತರ ಕಚೇರಿಯಲ್ಲಿ ಸಿಆರ್’ಪಿಸಿ ಕಲಂ 144ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.