
ಉಪ್ಪಿನಂಗಡಿ (ಅ. 14): ನಮ್ಮ ಗ್ರಾಮದಲ್ಲಿ ಮೊಬೈಲ್ ನೆಟ್ವರ್ಕ್ ಸರಿಯಿಲ್ಲ ಎಂದು ಇಲ್ಲಿಗೆ ಸಮೀಪದ ಗ್ರಾಮವೊಂದರ ಯುವಕನೋರ್ವ ಮೋದಿ ಆ್ಯಪ್ನಲ್ಲಿ ಸಲ್ಲಿಸಿದ ದೂರಿಗೆ ಭಾರೀ ಸ್ಪಂದನೆ ವ್ಯಕ್ತವಾಗಿದ್ದು, ಖಾಸಗಿ ಮೊಬೈಲ್ ಸಂಸ್ಥೆಗಳ ಕಂಪನಿಗಳ ಅಧಿಕಾರಿಗಳು ಗ್ರಾಮಕ್ಕೆ ದೌಡಾಯಿಸಿದ್ದಾರೆ.
ನಮ್ಮ ಗ್ರಾಮದಲ್ಲಿ ಸೂಕ್ತವಾಗಿ ನೆಟ್ವರ್ಕ್ ಸಿಗುತ್ತಿಲ್ಲ ಎಂದು ಉಪ್ಪಿನಂಗಡಿ ಸಮೀದ ಐತ್ತೂರು ಗ್ರಾಮದ ಅಂತಿಬೆಟ್ಟಿನ ನಿವಾಸಿ ಚೇತನ್ ಎಂಬುವರು ಮೋದಿ ಆ್ಯಪ್ನಲ್ಲಿ ದೂರು ದಾಖಲಿಸಿದ್ದರು. ಇದನ್ನು ಪರಿಶೀಲಿಸಿದ ಪ್ರಧಾನಮಂತ್ರಿಗಳ ಕಾರ್ಯಾಲಯದ ಅಧಿಕಾರಿಗಳ ಸೂಚನೆ ಮೇರೆಗೆ, ಖಾಸಗಿ ಮೊಬೈಲ್ ಸಂಸ್ಥೆಯ ಅಧಿಕಾರಿಗಳು ಐತ್ತೂರು ಗ್ರಾಮಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ಬಿಎಸ್ಎನ್ಎಲ್ ಅಧಿಕಾರಿಗಳು ಸಹ ಚೇತನ್ರನ್ನು ಸಂಪರ್ಕಿಸಿ, ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.