ತನ್ನನ್ನು ಕಂಡ ನಾಯಿ ಬೊಗಳುತ್ತಿದ್ದರಿಂದ ರೊಚ್ಚಿಗೆದ್ದ ಯುವಕ ಅದನ್ನು ಚಾಕುವಿನಿಂದ ಇರಿದು ಪರಾರಿಯಾಗಿರುವ ಘಟನೆ ಮೈಸೂರಿನ ಎನ್.ಆರ್ ಮೊಹಲ್ಲಾದ ಎಜೆ ಬ್ಲಾಕ್ನಲ್ಲಿ ಭಾನುವಾರ ಸಂಜೆ ನಡೆದಿದೆ.
ಮೈಸೂರು (ಜೂ.27): ತನ್ನನ್ನು ಕಂಡ ನಾಯಿ ಬೊಗಳುತ್ತಿದ್ದರಿಂದ ರೊಚ್ಚಿಗೆದ್ದ ಯುವಕ ಅದನ್ನು ಚಾಕುವಿನಿಂದ ಇರಿದು ಪರಾರಿಯಾಗಿರುವ ಘಟನೆ ಮೈಸೂರಿನ ಎನ್.ಆರ್ ಮೊಹಲ್ಲಾದ ಎಜೆ ಬ್ಲಾಕ್ನಲ್ಲಿ ಭಾನುವಾರ ಸಂಜೆ ನಡೆದಿದೆ.
ಆರೋಕ್ಯ ಮೇರಿ ಎಂಬವವರ ಸಾಕುನಾಯಿಗೆ ಪಕ್ಕದ ಮನೆಯ ನಿವಾಸಿ ಜುಲ್ಫಿಕರ್ (26) ಎಂಬಾತ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ. ಗಾಯಗೊಂಡಿರುವ ನಾಯಿಗೆ ಖಾಸಗಿ ಪಶು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಜುಲ್ಫಿಕರ್ ವಿರುದ್ಧ ಆರೋಕ್ಯಮೇರಿ ದೂರು ನೀಡಿದ್ದು, ಈ ಸಂಬಂಧ ಎನ್.ಆರ್. ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.