
ವಿಜಯಪುರ (ಏ. 06): ತಮ್ಮ ಪಟ್ಟಣಕ್ಕೆ ಸರ್ಕಾರಿ ಪ್ರೌಢಶಾಲೆ ಬೇಕು ಎಂದು ಯುವಕನೊಬ್ಬ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾನೆ.
ಮುದ್ದೇಬಿಹಾಳ ತಾಲೂಕಿನ ನಾಲತವಾಡ ನಿವಾಸಿ ವಿಜಯರಂಜನ ಜೋಶಿ ರಕ್ತದಲ್ಲಿ ಮೋದಿಗೆ ಪತ್ರ ಬರೆದು ಅಚ್ಚರಿ ಮೂಡಿಸಿದ್ದಾನೆ. ಹತ್ತು ಹದಿನೈದು ಸಾವಿರ ಜನಸಂಖ್ಯೆ ಇರುವ ನಾಲತವಾಡ ಪಟ್ಟಣದಲ್ಲಿ ಸರ್ಕಾರಿ ಪ್ರೌಢ ಶಾಲೆ, ಕಾಲೇಜುಗಳು ಯಾವುದೂ ಇಲ್ಲ. ನಾಲತವಾಡದಲ್ಲಿ ಸರ್ಕಾರಿ ಪ್ರೌಢಶಾಲೆ, ಕಾಲೇಜು ನಿರ್ಮಿಸುವಂತೆ ಶಿಕ್ಷಣ ಇಲಾಖೆಗೆ, ಶಿಕ್ಷಣ ಸಚಿವರಿಗೆ ಹಾಗೂ ರಾಜ್ಯ ಸರ್ಕಾರಕ್ಕೆ ಪತ್ರ ಬರೆದರೂ ಪ್ರಯೋಜನವಾಗಿಲ್ಲ. ರಾಜ್ಯ ಸರ್ಕಾರ ಸತ್ತು ಶವವಾಗಿದೆ ಎಂದು ಪ್ರಧಾನಿಗೆ ವಿಜಯರಂಜನ ಪತ್ರ ಬರೆದಿದ್ದಾನೆ. ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾನೆ.
ಹತ್ತಾರು ಹಳ್ಳಿಗಳಿಂದ ದೂರ ಹೋಗಿ ವಿದ್ಯಾರ್ಥಿಗಳು ಕಾಲೇಜು ಕಲಿಯಲು ಆಗುತ್ತಿಲ್ಲ. ಉತ್ತರ ಕರ್ನಾಕಟಲ್ಲಿ ಬರಗಾಲ, ಬಡತನ ಇರುವುದರಿಂದ ಖಾಸಗಿ ಶಾಲೆಯಲ್ಲಿ ಕಲಿಸುವಷ್ಟು ಶ್ರೀಮಂತರಲ್ಲ ಇಲ್ಲಿನ ಜನರು. ಸರ್ಕಾರಿ ಶಾಲೆ ಇಲ್ಲದೆ, ಶಿಕ್ಷಣ ಸಿಗದ ಕಾರಣ ಬಾಲ್ಯ ವಿವಾಹಗಳು ಹೆಚ್ಚಾಗುತ್ತಿದೆ. ನನಗೆ ತುಂಬ ನೋವಾಗಿದೆ, ನೀವಾದ್ರೂ ನಮ್ಮ ಸಮಸ್ಯೆಗೆ ಸ್ಪಂದಿಸುತ್ತೀರಿ ಎಂಬ ನಂಬಿಕೆ ಮೇಲೆ ಪತ್ರ ಬರೆದಿದ್ದೇನೆ ಎಂದು ಪತ್ರದಲ್ಲಿ ಬರೆದಿದ್ದಾನೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.