ಕೈ ಕೊಟ್ಟು ಬಿಜೆಪಿ ಸೇರಲು ರೆಡಿಯಾದ ಇಬ್ಬರು ಕಾಂಗ್ರೆಸ್ ಮುಖಂಡರು ?

Published : Jul 24, 2018, 12:18 PM IST
ಕೈ ಕೊಟ್ಟು ಬಿಜೆಪಿ ಸೇರಲು ರೆಡಿಯಾದ ಇಬ್ಬರು ಕಾಂಗ್ರೆಸ್ ಮುಖಂಡರು ?

ಸಾರಾಂಶ

ಹಾಸನದಿಂದ ಎ. ಮಂಜು, ತುಮಕೂರಿನಿಂದ ಕೆ.ಎನ್ ರಾಜಣ್ಣ  ಬಿಜೆಪಿ ಗೆ ಸೇರ್ಪಡೆ ಸಾಧ್ಯತೆ ಲೋಕಸಭೆಯಲ್ಲಿ ಎರಡೂ ಕ್ಷೇತ್ರಗಳು ಜೆಡಿಎಸ್ ಪಾಲಾದರೆ ಬಿಜೆಪಿಯಿಂದ ಸ್ಪರ್ಧಿಸುವ ಸುಳಿವು !

ಬೆಂಗಳೂರು[ಜು.24]: ಲೋಕಸಭೆ ಚುನಾವಣಾ ಮೈತ್ರಿಗೆ ಕಾಂಗ್ರೆಸ್ ಮಾಜಿ ಶಾಸಕರ ಅಪಸ್ವರ ಹಿನ್ನಲೆಯಲ್ಲಿ ಹಾಸನ, ತುಮಕೂರು ಜಿಲ್ಲೆಯಲ್ಲಿ ಪಕ್ಷದ ಪ್ರಮುಖ ನಾಯಕರು ತಿರುಗಿ ಬಿದ್ದಿದ್ದಾರೆ.

ಮೈತ್ರಿ ಬಗ್ಗೆ ಮಾತನಾಡಬೇಡಿ ಅಂದರೂ ಹಿರಿಯ ನಾಯಕರು ತಲೆಕೆಡಿಸಿಸಿಕೊಳ್ಳದ ಕಾರಣ  ಎರಡೂ ಜಿಲ್ಲೆಯ ಪ್ರಮುಖ ನಾಯಕರು ಬಿಜೆಪಿ ಹೋಗಲಿದ್ದಾರೆ ಎಂಬ ವದಂತಿಗಳು ಹರಡುತ್ತಿವೆ.

ಹಾಸನವನ್ನು ಜೆಡಿಎಸ್ ಗೆ ಬಿಟ್ಟುಕೊಟ್ಟರೆ ಜಿಲ್ಲೆಯ ಪ್ರಮುಖ ನಾಯಕ ಹಾಗೂ ಮಾಜಿ ಸಚಿವ ಎ.ಮಂಜು ಅವರು ಬಿಜೆಪಿಗೆ ಸೇರಿಕೊಳ್ಳಲಿದ್ದಾರೆ. ಕಳೆದ ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಸಚಿವರಾಗಿದ್ದ ಮಂಜು ತಮ್ಮ ಸ್ವಕ್ಷೇತ್ರ ಅರಕಲಗೂಡಿನಲ್ಲಿ ಜೆಡಿಎಸ್ ಅಭ್ಯರ್ಥಿ ಎ.ಟಿ.ರಾಮಸ್ವಾಮಿ ವಿರುದ್ಧ ಸೋಲು ಅನುಭವಿಸಿದ್ದರು. ಅದಲ್ಲದೆ ವಿಧಾನ ಸಭೆ ಚುನಾವಣೆಯಲ್ಲಿ ಬಿಜೆಪಿ ಒಂದು ಸ್ಥಾನ ಗೆಲ್ಲುವುದರೊಂದಿಗೆ ಖಾತೆ ತೆರೆದಿದ್ದು ಮಂಜುರನ್ನು ಬಿಜೆಪಿಗೆ ಸೆಳೆದುಕೊಂಡು ಲೋಕಸಭೆ ಚುನಾವಣೆಯಲ್ಲಿ ಅಧಿಪತ್ಯ ಸ್ಥಾಪಿಸಲು ಹೊರಟಿದೆ.

ಅದೇ ರೀತಿ ತುಮಕೂರಲ್ಲೂ  ಜೆಡಿಎಸ್ ಜೊತೆ ಕಾಂಗ್ರೆಸ್ ಮೈತ್ರಿ ಮಾಡಿಕೊಂಡರೆ ಪಕ್ಷ ತ್ಯಜಿಸುತ್ತೇನೆ ಎಂದಿರುವ ಹಿರಿಯ ಮುಖಂಡ ಕೆ.ಎನ್. ರಾಜಣ್ಣ ತುಮಕೂರು ಕ್ಷೇತ್ರ ಜೆಡಿಎಸ್ ಪಾಲಾದರೆ ಬಿಜೆಪಿಯಿಂದ ಸ್ಪರ್ಧಿಸುತ್ತಾರಾ ಎಂಬ ಮಾತುಗಳು ಕೇಳಿ ಬರುತ್ತಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Karnataka By-Election Results 2026 LIVE: ಇಂದು ದಾವಣಗೆರೆ ದಕ್ಷಿಣ, ಬಾಗಲಕೋಟೆ ಉಪ ಚುನಾವಣೆಯ ಫಲಿತಾಂಶ; ಕಾಂಗ್ರೆಸ್-ಬಿಜೆಪಿ ನಡುವೆ ಬಿಗ್ ಫೈಟ್
5 States Assembly Election Results 2026: ಇಂದು 5 ರಾಜ್ಯಗಳ ವಿಧಾನಸಭಾ ಫಲಿತಾಂಶ: ಪಂಚ ಗದ್ದುಗೆ ಯಾರಿಗೆ?