ಹೆಚ್.ಸಿ. ಬಾಲಕೃಷ್ಣ 'ಕೈ' ಸೇರ್ಪಡೆಗೆ ಎ.ಮಂಜು ಬೆಂಬಲಿಗರ ವಿರೋಧ:ಡಿಕೆ ಸಮ್ಮುಖದಲ್ಲೇ ವಾಗ್ವಾದ

Published : Aug 22, 2017, 06:28 PM ISTUpdated : Apr 11, 2018, 12:57 PM IST
ಹೆಚ್.ಸಿ. ಬಾಲಕೃಷ್ಣ 'ಕೈ' ಸೇರ್ಪಡೆಗೆ ಎ.ಮಂಜು ಬೆಂಬಲಿಗರ ವಿರೋಧ:ಡಿಕೆ ಸಮ್ಮುಖದಲ್ಲೇ ವಾಗ್ವಾದ

ಸಾರಾಂಶ

ಒಂದು ವೇಳೆ ಪಕ್ಷದಿಂದ ಬಾಲಕೃಷ್ಣ ಅವರಿಗೆ ಟಿಕೆಟ್ ನೀಡಿದರೆ ನಾವು ಯಾರು ಕೂಡ ಮತ ಹಾಕುವುದಿಲ್ಲ.ಪಕ್ಷದ ಮುಖಂಡರು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳ ಬೇಕು. ಹಿಂದಿನಿಂದಲೂ ಕಾಂಗ್ರೆಸ್ ಕಾರ್ಯಕರ್ತರು ಬಾಲಕೃಷ್ಣರನ್ನು ಜೆಡಿಎಸ್ ಪಕ್ಷದ ಎದುರಾಳಿಯಾಗಿ ನೋಡಿದ್ದೇವೆ.ಈಗ ಕಾಂಗ್ರೆಸ್ ಪಕ್ಷಕ್ಕೆ ಬಂದರೆ ನಾವು ಮತಹಾಕುವುದು ಹೇಗೆ ಎಂದು ನೂರಾರು ಕಾರ್ಯಕರ್ತರು ಡಿಕೆಶಿ ಅವರಿಗೆ ಪ್ರಶ್ನೆ ಮಾಡಿದರು.

ನೆಲಮಂಗಲ(ಆ.22): ಜೆಡಿಎಸ್'ನ ಬಂಡಾಯ ಶಾಸಕ ಹೆಚ್.ಸಿ. ಬಾಲಕೃಷ್ಣ ಕಾಂಗ್ರೆ'ಸ್ ಸೇರ್ಪಡೆಗೆ ಮಾಗಡಿ ತಾಲೂಕಿನ ಕಾಂಗ್ರೆಸ್ ಕಾಂಗ್ರೆಸ್ ಮುಖಂಡ ಎ. ಮಂಜು  ಬೆಂಬಲಿಗರಿಂದ ವಿರೋಧ ವ್ಯಕ್ತ'ವಾಗಿದೆ.

ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ನೆಲಮಂಗಲದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಕಾರ್ಯ'ಕರ್ತರು 'ಕಾಂಗ್ರೆಸ್ ಪಕ್ಷದಿಂದ ಬಾಲಕೃಷ್ಣ ಅವರಿಗೆ ಹೈಕಮಾಂಡ್ ಏನಾದರು ಮುಂದಿನ ವಿಧಾನಸಭಾ ಚುನಾವಣೆಗೆ ಟಿಕೆಟ್ ನೀಡಿದರೆ  ಖಂಡಿತ ಅವರು ಗೆಲ್ಲುವುದಿಲ್ಲ. ಕಾಂಗ್ರೆಸ್ ಪಕ್ಷಕ್ಕೆ ದುಡಿದ ಎ.ಮಂಜು ಅವರಿಗೆ ಟಿಕೆಟ್ ನೀಡಬೇಕು ಎಂದು ಕಾರ್ಯಕರ್ತರು ಆಗ್ರಹಿಸಿದರು.

ಒಂದು ವೇಳೆ ಪಕ್ಷದಿಂದ ಬಾಲಕೃಷ್ಣ ಅವರಿಗೆ ಟಿಕೆಟ್ ನೀಡಿದರೆ ನಾವು ಯಾರು ಕೂಡ ಮತ ಹಾಕುವುದಿಲ್ಲ.ಪಕ್ಷದ ಮುಖಂಡರು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳ ಬೇಕು. ಹಿಂದಿನಿಂದಲೂ ಕಾಂಗ್ರೆಸ್ ಕಾರ್ಯಕರ್ತರು ಬಾಲಕೃಷ್ಣರನ್ನು ಜೆಡಿಎಸ್ ಪಕ್ಷದ ಎದುರಾಳಿಯಾಗಿ ನೋಡಿದ್ದೇವೆ.ಈಗ ಕಾಂಗ್ರೆಸ್ ಪಕ್ಷಕ್ಕೆ ಬಂದರೆ ನಾವು ಮತಹಾಕುವುದು ಹೇಗೆ ಎಂದು ನೂರಾರು ಕಾರ್ಯಕರ್ತರು ಡಿಕೆಶಿ ಅವರಿಗೆ ಪ್ರಶ್ನೆ ಮಾಡಿದರು.

ಜೇಡರಹಳ್ಳಿ ಕೃಷ್ಣಪ್ಪ ಮಾತನಾಡುತಿದ್ದಂತೆ ಕೆಲ ಕಾರ್ಯಕರ್ತರು ಮಾತಿನ ಚಕಮಕಿಗೆ ಮುಂದಾಗಿ ಸಭೆಯಿಂದ ಹೊರನಡೆದರು.

ಎ.ಮಂಜು ಕಾಂಗ್ರೆಸ್ ಪಕ್ಷದಲ್ಲೇ ಇರಲಿ: ಬಾಲಕೃಷ್ಣ

ಈ ನಡುವೆ ರಾಮನಗರದಲ್ಲಿ ಮಾತನಾಡಿದ ಜೆಡಿಎಸ್ ಬಂಡಾಯ ಶಾಸಕ ಹೆಚ್.ಸಿ.ಬಾಲಕೃಷ್ಣ ಕ್ಷೇತ್ರದ ಕಾಂಗ್ರೆಸ್ ಮುಖಂಡ ಎ.ಮಂಜು ವಿರುದ್ಧ ಆಕ್ರೋಶ ವ್ಯಕ್ತ'ಪಡಿಸಿದ್ದಾರೆ.

ನೆಲಮಂಗಲದಲ್ಲಿ ನಡೆದ ಸಭೆಯಲ್ಲಿ ಕಾರ್ಯಕರ್ತರು ತಮ್ಮ ಅಭಿಪ್ರಾಯ ವ್ಯಕ್ತಪಡಿಸುವುದು ಅವರ ಹಕ್ಕು. ಎಲ್ಲ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿಲ್ಲ. ಕೆಲವರು ಮಾತ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಎ.ಮಂಜು ಕಾಂಗ್ರೆಸ್ ಪಕ್ಷದಲ್ಲೆ ಇದ್ದು ಜಿ.ಪಂ ಅಧ್ಯಕ್ಷರಾಗಲಿ. ಅದನ್ನು ಬಿಟ್ಟು ಜೆಡಿಎಸ್ ಪಕ್ಷ ಸೇರಿಕೊಂಡಿದ್ದಾರೆ. ಎ.ಮಂಜು ಕಾಂಗ್ರೆಸ್ ಪಕ್ಷದಲ್ಲೆ ಇರಲಿ ನನ್ನದೇನು ತಕರಾರು ಇಲ್ಲ. ಹೈಕಮಾಂಡ್ ಮಂಜುಗೆ ಟಿಕೆಟ್ ಕೊಟ್ಟರೆ ನಾನು ಅವರ ಪರ ದುಡಿಯುತ್ತೇನೆ. ಒಂದು ವೇಳೆ ನನಗೆ ಟಿಕೆಟ್  ನೀಡಿದರೆ ಅವರು ನನ್ನ ಪರ ಕೆಲಸ ಮಾಡಲಿ' ಎಂದು ತಿಳಿಸಿದರು.

ನನ್ನ ಬೆಂಬಲಿಗರು ಕಾಂಗ್ರೆಸ್ ಸಭೆಗೆ ಹೋಗಿಲ್ಲ. ಎ.ಮಂಜು ಸಚಿವರ ಹಾಗೂ ಸಂಸದರ ಜೊತೆಗೆ ಒಂದು ಸಭೆ ಮಾಡಬಹುದಿತ್ತು. ಆದರೆ ಏಕಾಏಕಿ ಪಕ್ಷ ಬಿಟ್ಟು ಹೋಗುವ ಪ್ರಮೇಯ ಏನಿತ್ತು.ಇಗಲು ಬರಲಿ ನಾನು ಜೆಡಿಎಸ್ ಅಲ್ಲ ಕಾಂಗ್ರೆಸ್ ಪಕ್ಷದವನೆ ಎಂದು ಬರಲಿ' ಎಂದು ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

11 ನಿಮಿಷ ಉಸಿರು ಚೆಲ್ಲಿ ಬದುಕಿದ ಮಹಿಳೆ: ಸ್ವರ್ಗ- ನರಕದ ನಂಬಲಾಗದ ಅನುಭವ ಬಿಚ್ಚಿಟ್ಟಿದ್ದು ಹೀಗೆ
DRDO ನೇಮಕಾತಿ, ಬರೋಬ್ಬರಿ 764 ತಾಂತ್ರಿಕ ಸಹಾಯಕ, ತಂತ್ರಜ್ಞ ಹುದ್ದೆಗಳಿಗೆ ಅರ್ಹರಿಂದ ಅರ್ಜಿ ಆಹ್ವಾನ