
ಕೊಚ್ಚಿ[ಅ.02]: ಶಬರಿಮಲೆಯ ಅಯ್ಯಪ್ಪಸ್ವಾಮಿ ದೇವಾಲಯಕ್ಕೆ ಮಹಿಳೆಯರು ಪ್ರವೇಶಿಸಲು ಅನುಮತಿ ಕಲ್ಪಿಸಿದ ಸುಪ್ರೀಂಕೋರ್ಟ್ ಆದೇಶವನ್ನು ವಿರೋಧಿಸಿ ಆತ್ಮಹತ್ಯೆಗೆ ಯತ್ನಿಸುವುದಾಗಿ ಬೆದರಿಕೆಯೊಡ್ಡಿದ ವ್ಯಕ್ತಿಯೊಬ್ಬನನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ.
ಹಿಂದು ಸಂಘಟನೆಯೊಂದರ ಕಾರ್ಯಕರ್ತನಾದ ಶ್ರೀರಾಜ್ ಎಂಬಾತ ಸುಪ್ರೀಂಕೋರ್ಟ್ ಆದೇಶದಿಂದ ಮನನೊಂದು ಇಲ್ಲಿನ ಹೈಕೋರ್ಟ್ ಜಂಕ್ಷನ್ ಎದುರು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಫೇಸ್ಬುಕ್ನಲ್ಲಿ ಪೋಸ್ಟ್ವೊಂದನ್ನು ಹಾಕಿದ್ದ.
ಈತ ಎರಡು ದಿನದ ಹಿಂದೆ ಹಾಕಿದ್ದ ಪೋಸ್ಟ್ ವೈರಲ್ ಆಗಿದ್ದು, ಆತ್ಮಹತ್ಯೆಯನ್ನು ತಡೆಯಲು ಪೊಲೀಸರನ್ನು ನಿಯೋಜಿಸಲಾಗಿತ್ತು. ಪೆಟ್ರೋಲ್ ಕ್ಯಾನ್ ಹಿಡಿದು ಹೈಕೋರ್ಟ್ ಬಳಿ ಮಧ್ಯಾಹ್ನ 1.30ರ ಸುಮರಿಗೆ ಬರುತ್ತಿದ್ದ ವೇಳೆ ಶ್ರೀರಾಜ್ನನ್ನು ಪೊಲೀಸರು ಬಂಧಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.