ಸಾವಿನಲ್ಲೂ ಒಂದಾದ ದಂಪತಿ..!

Published : Sep 24, 2018, 03:08 PM IST
ಸಾವಿನಲ್ಲೂ ಒಂದಾದ ದಂಪತಿ..!

ಸಾರಾಂಶ

ಸಾವಿನಲ್ಲೂ ಗಂಂಡ-ಹೆಂಡತಿ ಒಂದಾಗಿದ್ದಾರೆ. ಆಂಬುಲೆನ್ಸ್​ನಲ್ಲಿ ಮೃತಪಟ್ಟ ಪತಿಯ ಶವವನ್ನು ಮನೆಗೆ ಸಾಗಿಸುತ್ತಿದ್ದ ವೇಳೆ ಅಪಘಾತದಲ್ಲಿ ಪತ್ನಿ ಮೃತಪಟ್ಟ ಘಟನೆ ರಾಯಚೂರು ಜಿಲ್ಲೆಯ ಮಸ್ಕಿ ಬಳಿ ನಡೆದಿದೆ.

ರಾಯಚೂರು, [ಸೆ.24]: ಸಾವಿನಲ್ಲೂ ಗಂಂಡ-ಹೆಂಡತಿ ಒಂದಾಗಿದ್ದಾರೆ. ಆಂಬುಲೆನ್ಸ್​ನಲ್ಲಿ ಮೃತಪಟ್ಟ ಪತಿಯ ಶವವನ್ನು ಮನೆಗೆ ಸಾಗಿಸುತ್ತಿದ್ದ ವೇಳೆ ಅಪಘಾತದಲ್ಲಿ ಪತ್ನಿ ಮೃತಪಟ್ಟ ಘಟನೆ ರಾಯಚೂರು ಜಿಲ್ಲೆಯ ಮಸ್ಕಿ ಬಳಿ ನಡೆದಿದೆ.

ಗಂಗಪ್ಪ ಎಂಬುವರು ಅನಾರೋಗ್ಯದಿಂದ ಬೆಂಗಳೂರು ಆಸ್ಪತ್ರೆಗೆ ದಾಖಲಾಗಿದ್ದರು. ಸೋಮವಾರ ಆಸ್ಪತ್ರೆಯಲ್ಲೇ ಮೃತಪಟ್ಟ ಅವರ ಶವವನ್ನು ಆಂಬುಲೆನ್ಸ್​ನಲ್ಲಿ ಸ್ವಗ್ರಾಮ ಸುರಪುರಕ್ಕೆ ತೆಗೆದುಕೊಂಡು ಬರಲಾಗುತ್ತಿತ್ತು. ಈ ವೇಳೆ ಮಸ್ಕಿ ಬಳಿ ಆಂಬುಲೆನ್ಸ್​ಗೆ ಟ್ರ್ಯಾಕ್ಟರ್​ ಡಿಕ್ಕಿ ಹೊಡೆದಿದೆ.

ಈ ಘಟನೆಯಲ್ಲಿ ಗಂಗಪ್ಪ ಪತ್ನಿ ಶ್ರೀದೇವಿ (30) ಸೇರಿ ನಾಲ್ವರು ತೀವ್ರ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಮಸ್ಕಿ ಆಸ್ಪತ್ರೆಗೆ ಸೇರಿಸುವ ಮಾರ್ಗಮಧ್ಯದಲ್ಲಿ ಶ್ರೀದೇವಿ ಮೃತಪಟ್ಟಿದ್ದಾರೆ. ಈ ಬಗ್ಗೆ ಮಸ್ಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಪ್ರಧಾನಿಗೆ ಪತ್ರ ಬರೆಯುವುದರಲ್ಲಿ ಸಿದ್ದರಾಮಯ್ಯ, ಡಿಕೆಶಿ ನಿಸ್ಸೀಮರು: ಬಿ.ವೈ.ವಿಜಯೇಂದ್ರ
ವಿದೇಶಗಳಿಗೆ ಭಾರತೀಯ ಪ್ರತಿಭೆ : ನಷ್ಟವೋ ? ಪ್ರಭಾವವೋ?