ಆಧಾರ್'ನಿಂದ ಸರ್ಕಾರಕ್ಕೆ ಸಾವಿರಾರು ಕೋಟಿ ರುಪಾಯಿ ಉಳಿತಾಯ

Published : Oct 13, 2017, 05:54 PM ISTUpdated : Apr 11, 2018, 12:53 PM IST
ಆಧಾರ್'ನಿಂದ ಸರ್ಕಾರಕ್ಕೆ ಸಾವಿರಾರು ಕೋಟಿ ರುಪಾಯಿ ಉಳಿತಾಯ

ಸಾರಾಂಶ

ಈಗಾಗಲೇ ಒಂದು ಬಿಲಿಯನ್'ಗೂ ಹೆಚ್ಚು ಮಂದಿ ಆಧಾರ್ ಕಾರ್ಡ್ ಹೊಂದಿದ್ದಾರೆಂದು ಇನ್ಫೋಸಿಸ್'ನ ಕಾರ್ಯ ನಿರ್ವಕೇತರ ಮುಖ್ಯಸ್ಥ ನಿಲೇಕಣಿ ಸಂತಸ ವ್ಯಕ್ತಪಡಿಸಿದ್ದಾರೆ.

ವಾಷಿಂಗ್ಟನ್(ಅ.13): ಭಾರತ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಆಧಾರ್'ನಿಂದಾಗಿ ಸರ್ಕಾರಕ್ಕೆ ಸಾವಿರಾರು ಕೋಟಿ ರೂಪಾಯಿಗಳು ಉಳಿತಾಯವಾಗಿದೆ ಎಂದು ಆಧಾರ್ ಕಾರ್ಡ್ ರೂವಾರಿ ನಂದನ್ ನೀಲೆಕಣಿ ಅಭಿಪ್ರಾಯಪಟ್ಟಿದ್ದಾರೆ.

ಸಾಕಷ್ಟು ಮಂದಿ ಸರ್ಕಾರಕ್ಕೆ ವಂಚನೆ ಮಾಡುವ ಮೂಲಕ ಹಲವಾರು ಸೌಲಭ್ಯಗಳನ್ನು ಪಡೆಯುತ್ತಿದ್ದುದನ್ನು ತಡೆಹಿಡಿಯುವ ಮೂಲಕ ಬೊಕ್ಕಸಕ್ಕೆ 58,422 ಕೋಟಿ ರುಪಾಯಿ ಉಳಿಸಲು ಸಹಾಯಕವಾಗಿದೆ ಎಂದು ನಂದನ್ ನೀಲೆಕಣಿ ಹೇಳಿದ್ದಾರೆ.

ಯುಪಿಎ-2 ಅವಧಿಯಲ್ಲಿ ಜಾರಿಯಾದ ಆಧಾರ್ ಯೋಜನೆಗೆ ಪ್ರಸ್ತುತ ನರೇಂದ್ರ ಮೋದಿ ನೇತೃತ್ವದ ಎನ್'ಡಿಎ ಸರ್ಕಾರ ಹಾಗೂ ವಿತ್ತ ಸಚಿವ ಅರುಣ್ ಜೇಟ್ಲಿ ಸಂಪೂರ್ಣ ಬೆಂಬಲ ನೀಡುತ್ತಿದ್ದಾರೆ. ಈಗಾಗಲೇ ಒಂದು ಬಿಲಿಯನ್'ಗೂ ಹೆಚ್ಚು ಮಂದಿ ಆಧಾರ್ ಕಾರ್ಡ್ ಹೊಂದಿದ್ದಾರೆಂದು ಇನ್ಫೋಸಿಸ್'ನ ಕಾರ್ಯ ನಿರ್ವಕೇತರ ಮುಖ್ಯಸ್ಥ ನಿಲೇಕಣಿ ಸಂತಸ ವ್ಯಕ್ತಪಡಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಾಜಕೀಯ ತೀಟೆಗೆ ಆರೋಪ, ಯಾವುದೇ ತನಿಖೆಗೆ ಸಿದ್ಧ: ಸಚಿವ ಕೃಷ್ಣ ಬೈರೇಗೌಡ
ಮುಂದಿನ 72 ಗಂಟೆಯಲ್ಲಿ ಭೂಮಿಯತ್ತ 10 ಕ್ಷುದ್ರ ಗ್ರಹ, ಡೇಂಜರ್ ಝೋನ್‌ನಲ್ಲಿದೆಯಾ ಜಗತ್ತು?