
ನವದೆಹಲಿ: ಆಧಾರ್’ ಕಡ್ಡಾಯಗೊಳಿಸುವಿಕೆ ಹಾಗೂ ವ್ಯಕ್ತಿಯ ಖಾಸಗಿತನದ ಬಗ್ಗೆ ಚರ್ಚೆಗಳು ನಡೆಯುತ್ತಿರುವ ನಡುವೆಯೇ ಹೊಸ ಆಧಾರ್ ನಿಯಮವೊಂದು ಜಾರಿಗೆ ಬರಲಿದೆ.
ಹೊಸ ನಿಯಮದ ಪ್ರಕಾರ ವ್ಯಕ್ತಿಯ ಮರಣ ಪ್ರಮಾಣ ಪತ್ರ ಪಡೆಯಬೇಕಾದರೆ, ಮೃತ ವ್ಯಕ್ತಿಯನ್ನು ಗುರುತಿಸಲು ಇನ್ಮುಂದೆ ಆತನ/ಆಕೆಯ ಆಧಾರ್ ಸಂಖ್ಯೆಯನ್ನು ಕಡ್ಡಾಯವಾಗಿ ನಮೂದಿಸಬೇಕು, ಎಂದು ಏಎನ್ಐ ವರದಿ ಮಾಡಿದೆ.
ಮುಂಬರುವ ಅಕ್ಟೋಬರ್ 1ರಿಂದ ನಿಯಮವು ದೇಶಾದ್ಯಂತ ಜಾರಿಯಾಗಲಿದೆ ಎನ್ನಲಾಗಿದೆ.
ಈ ಹಿಂದೆ ಸರ್ಕಾರವು ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸಲು ಆಧಾರ್ ಕಾರ್ಡನ್ನು ಕಡ್ಡಾಯಗೊಳಿಸಿತ್ತು. ಅದೇ ರೀತಿ ಜು. 1 ರಿಂದ ಪ್ಯಾನ್ ಪ್ಯಾನ್ ಕಾರ್ಡ್’ಗೆ ಆಧಾರ್ ಕಾರ್ಡ್ ಲಿಂಕ್ ಮಾಡವುದು ಕಡ್ಡಾಯಗೊಳಿಸಿದೆ.
ಆಧಾರ್’ಗೆ ಸಂಬಂಧಿಸಿದಂತೆ ವ್ಯಕ್ತಿಯ ಖಾಸಗಿತನದ ಹಕ್ಕು ಮೂಲಭೂತ ಹಕ್ಕು ಹೌದೋ ಅಲ್ಲವೋ ಎಂಬ ಬಗ್ಗೆ ಸುಪ್ರೀಂ ಕೋರ್ಟ್ ತನ್ನ ತೀರ್ಪನ್ನು ಕಾಯ್ದಿರಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.