
ಬೆಂಗಳೂರು (ಸೆ.02): ನೀವು ಯಾವುದೇ ಧಾರ್ಮಿಕ ಸ್ಥಳಗಳಿಗೆ ಪ್ರವಾಸ ಹೋಗಬೇಕಾದರೆ ಇನ್ನು ಮುಂದೆ ಆಧಾರ್ ಕಾರ್ಡನ್ನು ಕಡ್ಡಾಯವಾಗಿ ಹೊಂದಿರಲೇಬೇಕು.
ಧಾರ್ಮಿಕ ಪ್ರವಾಸಗಳಿಗೆ ಸಿಗುವ ಸಬ್ಸಿಡಿಯನ್ನು ಪಡೆಯಬೇಕಾದರೆ ಕಡ್ಡಾಯವಾಗಿ ಆಧಾರ್ ಕಾರ್ಡನ್ನು ಹೊಂದಿರಲೇ ಬೇಕು ಎಂದು ಕರ್ನಾಟಕ ಸರ್ಕಾರ ಆದೇಶಿಸಿದೆ. ಬದ್ರಿನಾಥ್, ಕೇದಾರನಾಥ್, ಗಂಗೋತ್ರಿ ಮತ್ತು ಯಮುನೋತ್ರಿಗಳಿಗೆ ಟಿಕೆಟ್ ಬುಕ್ ಮಾಡುವವರು ಆಧಾರ್ ಕಾರ್ಡನ್ನು ಹೊಂದಿದ್ದರೆ ಮಾತ್ರ ಸಬ್ಸಿಡಿ ಸಿಗಲಿದೆ. ಧಾರ್ಮಿಕ ಯಾತ್ರೆಗಳಿಗೆ ರೂ.20 ಸಾವಿರ ಸಬ್ಸಿಡಿ ದೊರಕಲಿದೆ.
ಪ್ರತಿ ವರ್ಷ 1000-1500 ಯಾತ್ರಾರ್ಥಿಗಳು ಸಬ್ಸಿಡಿಯನ್ನು ಪಡೆಯುತ್ತಾರೆ. ಹಣದ ದುರುಪಯೋಗವನ್ನು ತಡೆಗಟ್ಟಲು ಸರ್ಕಾರ ಆಧಾರ್ ಕಾರ್ಡನ್ನು ಕಡ್ಡಾಯಗೊಳಿಸಿದೆ. ಸಿಎಂ ಸಿದ್ದರಾಮಯ್ಯ ಸರ್ಕಾರ 2014 ರಲ್ಲಿ ಈ ಸಬ್ಸಿಡಿ ಸೌಲಭ್ಯವನ್ನು ಜಾರಿಗೆ ತಂದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.