
ಮುಂಬೈ: ಸರ್ಕಾರಿ ಯೋಜನೆಗಳ ಅಕ್ರಮ ಮತ್ತು ಸೋರಿಕೆ ತಡೆಗಾಗಿ ವಿವಿಧ ಯೋಜನೆಗಳಿಗೆ ಆಧಾರ್ ಜೋಡಣೆ ಕಡ್ಡಾಯಗೊಳಿಸಿದ್ದ ಕೇಂದ್ರ ಸರ್ಕಾರ, ಇದೀಗ ಮತ್ತೊಂದು ಮಹತ್ವದ ನಿರ್ಧಾರಕ್ಕೆ ಮುಂದಾಗಿದೆ. ರಿಯಲ್ ಎಸ್ಟೇಟ್, ಕಪ್ಪು ಹಣ ನಿಯಂತ್ರಣ, ಬೇನಾಮಿ ಆಸ್ತಿ ಸಂಪಾದನೆ ನಿಗ್ರಹಕ್ಕಾಗಿ ಆಸ್ತಿ ವ್ಯವಹಾರಗಳಿಗೂ ಆಧಾರ್ ಜೋಡಣೆ ಕಡ್ಡಾಯಗೊಳಿಸುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ.
ಆಸ್ತಿಗಳ ಮಾರಾಟ ಮತ್ತು ಖರೀದಿಗೂ ಆಧಾರ್ ಜೋಡಣೆ ಮಾಡುವ ಕುರಿತು ಇದೇ ಮೊದಲ ಬಾರಿಗೆ ನರೇಂದ್ರ ಮೋದಿ ಮಂತ್ರಿಮಂಡಲದ ವಸತಿ ಸಚಿವ ಹರ್ದೀಪ್ ಪುರಿ ಅವರು ಬಹಿರಂಗ ಹೇಳಿಕೆ ನೀಡಿದ್ದಾರೆ.
ಟೀವಿ ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ‘ ಆಸ್ತಿ ಜತೆ ಆಧಾರ್ ಜೋಡಣೆ ಒಂದು ಅತ್ಯುತ್ತಮ ಚಿಂತನೆಯಾಗಿದೆ. ಆದರೆ ಈ ಬಗ್ಗೆ ನಾನು ಅಧಿಕೃತ ಘೋಷಣೆ ಮಾಡಲ್ಲ. ನಾವು ಈಗಾಗಲೇ ಬ್ಯಾಂಕ್ ಖಾತೆಗಳು, ಸರ್ಕಾರದ ಫಲಾನುಭವಿಗಳಿಗೆ ಆಧಾರ್ ಜೋಡಣೆ ಮಾಡಿದ್ದೇವೆ. ಅದರ ಮುಂದುವರಿದ ಯೋಜನೆ ಇದಾಗಬಹುದು’ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.