ಹೊಸ ಪಕ್ಷ ಕಟ್ಟುತ್ತಾರೋ? ಆಮ್ ಆದ್ಮಿ ಸೇರುತ್ತಾರೋ?: ಇಂದು ನಟ ಕಮಲ್ ಹಾಸನ್, ಕೇಜ್ರೀವಾಲ್ ಭೇಟಿ

Published : Sep 21, 2017, 10:05 AM ISTUpdated : Apr 11, 2018, 12:44 PM IST
ಹೊಸ ಪಕ್ಷ ಕಟ್ಟುತ್ತಾರೋ? ಆಮ್ ಆದ್ಮಿ ಸೇರುತ್ತಾರೋ?: ಇಂದು ನಟ ಕಮಲ್ ಹಾಸನ್, ಕೇಜ್ರೀವಾಲ್ ಭೇಟಿ

ಸಾರಾಂಶ

ಖ್ಯಾತ ನಟ ಕಮಲ್ ಹಾಸನ್ ರಾಜಕೀಯದಲ್ಲಿ ಸದಾ ಸುದ್ದಿಯಾಗುತ್ತಲೇ ಇದ್ದಾರೆ. ಇದೇ ರೀತಿಯಾಗಿ ಇಂದು ಚೆನ್ನೈನಲ್ಲಿ ಆಮ್ ಆದ್ಮಿ ಪಾರ್ಟಿಯ ಮುಖ್ಯಸ್ಥ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರೀವಾಲ್ ಅವರನ್ನ ಭೇಟಿಯಾಗಲಿದ್ದಾರೆ.

ಚೆನ್ನೈ(ಸೆ.21): ಖ್ಯಾತ ನಟ ಕಮಲ್ ಹಾಸನ್ ರಾಜಕೀಯದಲ್ಲಿ ಸದಾ ಸುದ್ದಿಯಾಗುತ್ತಲೇ ಇದ್ದಾರೆ. ಇದೇ ರೀತಿಯಾಗಿ ಇಂದು ಚೆನ್ನೈನಲ್ಲಿ ಆಮ್ ಆದ್ಮಿ ಪಾರ್ಟಿಯ ಮುಖ್ಯಸ್ಥ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರೀವಾಲ್ ಅವರನ್ನ ಭೇಟಿಯಾಗಲಿದ್ದಾರೆ.

ಈಗಾಗಲೇ ಹೊಸ ರಾಜಕೀಯ ಪಕ್ಷ ಸ್ಥಾಪಿಸುವ  ಸುಳಿವು ಕೊಟ್ಟಿರುವ ಕಮಲ್ ಹಾಸನ್, ಇತ್ತೀಚೆಗಷ್ಟೇ ಕೇರಳ ಸಿಎಂ ಪಿಣರಾಯಿ ವಿಜಯನ್ ಅವರನ್ನ ಭೇಟಿಯಾಗಿ, ರಾಜಕೀಯ ಕುರಿತು ಸಲಹೆ ಪಡೆದಿದ್ದರು. ರಾಜಕೀಯದ ಬಗ್ಗೆ ಸಾಕಷ್ಟು ಒಲವು ಹೊಂದಿರುವ ನಟ ಕಮಲ್ ಹಾಸನ್, ತಮಿಳುನಾಡಿನ ಮುಖ್ಯಮಂತ್ರಿ ಹಾಗೂ ಸರ್ಕಾರದ ಕಾರ್ಯ ವೈಖರಿ ಬಗ್ಗೆ  ಸಾಕಷ್ಟು ಬಾರಿ ಟ್ವಿಟರ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಂದು ಅರವಿಂದ್ ಕೇಜ್ರೀವಾಲ್ ಅವರನ್ನ ಭೇಟಿ ಮಾಡುತ್ತಿರುವುದು ಸಾಕಷ್ಟು ಕುತೂಹಲ ಕೆರಳಿಸಿದೆ. ಈ ಮೂಲಕ ಕಮಲ್ ಹೊಸ ಪಕ್ಷ ಸ್ಥಾಪಿಸುತ್ತಾರೋ ಅಥವಾ ಕೇಜ್ರೀವಾಲ್ ಅವರ ಆಮ್ ಆದ್ಮಿ ಪಾರ್ಟಿ ಸೇರುತ್ತಾರೋ ಎಂಬ ಬಗ್ಗೆ ಸಾಕಷ್ಟು ಕುತೂಹಲ ಹುಟ್ಟು ಹಾಕಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಳಗಾವಿ ಡಿಸಿ ಟಾರ್ಗೆಟ್; ಎಂಇಎಸ್ ಪರ ನಿಂತು ಲೋಕಸಭೆ ಸ್ಪೀಕರ್‌ಗೆ ದೂರು ನೀಡಿದ ಮಹಾರಾಷ್ಟ್ರದ ಸಂಸದ ಮಾನೆ!
ಹಿಂದೂಗಳಿಗಿಂತ ಮುಸ್ಲಿಮರ ಮೇಲೆ ಹೆಚ್ಚು ಬಾಂಡ್: ಎಸ್‌ಡಿಪಿಐ ಆರೋಪಕ್ಕೆ ಅಂಕಿ-ಅಂಶ ಸಮೇತ ಕಮಿಷನರ್ ತಿರುಗೇಟು!