
ನವದೆಹಲಿ(ಜು.13): ನೂತನ ರಾಷ್ಟ್ರಪತಿ ಚುನಾವಣೆಯಲ್ಲಿ ಎಎಪಿ ಪಕ್ಷವು ತನ್ನ ಬೆಂಬಲವನ್ನು ವಿರೋಧ ಪಕ್ಷಗಳ ಅಭ್ಯರ್ಥಿ ಮಾಜಿ ಲೋಕಸಭೆ ಸ್ಪೀಕರ್ ಮೀರಾ ಕುಮಾರ್ ಅವರಿಗೆ ನೀಡುವುದಾಗಿ ತಿಳಿಸಿದೆ.
ಎಎಪಿ ಪಕ್ಷದ ರಾಷ್ಟ್ರೀಯ ವಕ್ತಾರರಾದ ಸಂಜಯ್ ಸಿಂಗ್ ತಿಳಿಸಿದ್ದು, ರಾಷ್ಟ್ರಪತಿ ಹಾಗೂ ಉಪರಾಷ್ಟ್ರಪತಿಯಾಗಿ ನೇಮಕವಾಗುವವರು ಪಕ್ಷಪಾತ ರಾಜ್ಯಪಾಲರಾಗಿರಬೇಕು ಹಾಗೂ ನಾವು ಸಹ ಒಮ್ಮತದ ಅಭ್ಯರ್ಥಿಯನ್ನು ಆರಿಸಿಕೊಳ್ಳಲು ಬಯಸುತ್ತೇವೆ. ಆದರೆ ಪ್ರಸ್ತುತ ಸನ್ನಿವೇಷದಲ್ಲಿ ನಾವು ಬಲಾಢ್ಯ ನಾಯಕಿಗೆ ಬೆಂಬಲ ನೀಡಲು ಇಚ್ಚಿಸುತ್ತೇವೆ' ಎಂದು ತಿಳಿಸಿದ್ದಾರೆ.
ಕೋವಿಂದ್ ಅವರಿಗೆ ಜೆಡಿಯು ಹಾಗೂ ಬಿಎಸ್'ಪಿ ಪಕ್ಷಗಳು ಸಹ ಬೆಂಬಲ ನೀಡಿವೆ. ಮುಂದಿನ ರಾಷ್ಟ್ರಪತಿ ಚುನಾವಣೆಯು ಜುಲೈ 20ರಂದು ಸಂಜೆ ನಡೆಯಲಿದ್ದು, ಆಡಳಿತ ಪಕ್ಷದ ಅಭ್ಯರ್ಥಿಯಾಗಿ ಬಿಹಾರದ ಮಾಜಿ ರಾಜ್ಯಪಾಲ ರಮನಾಥ್ ಕೋವಿಂದ್ ಸ್ಪರ್ಧಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.