
ನವದೆಹಲಿ (ಜ.04): ಕೇಂದ್ರ ಚುನಾವಣಾ ಆಯೋಗವು 5 ರಾಜ್ಯಗಳ ವಿಧಾನಸಭೆಗೆ ಮತದಾನ ದಿನಾಂಕಗಳನ್ನು ಘೋಷಿಸಿರುವ ಬೆನ್ನಲ್ಲೇ, ಆಮ್ ಆದ್ಮಿ ಪಕ್ಷವು ಅದಕ್ಕೆ ಆಕ್ಷೇಪವನ್ನೆತ್ತಿದೆ.
ಮೊದಲ ಹಂತದ ಮತದಾನ ಆರಂಭವಾಗುವ ಕೇವಲ ಮೂರು ದಿನ ಮುಂಚೆ ಕೇಂದ್ರ ಸರ್ಕಾರವು ಬಜೆಟ್ ಮಂಡಿಸುವುದು ಚುನಾವಣೆಯ ನೀತಿ ಸಂಹಿತೆಯ ಉಲ್ಲಂಘನೆಯಾಗುತ್ತದೆ ಎಂದು ಆಪ್ ಪಕ್ಷದ ಮುಖಂಡ ಅಶುತೋಶ್ ರಾಣಾ ಟ್ವೀಟಿಸಿದ್ದಾರೆ.
ಈ ಹಿಂದೆ, ಪಂಜಾಬ್ ಹಾಗೂ ಗೋವಾ ಚುನಾವಣೆಗಳನ್ನು ಬೇರೆ ಬೇರೆ ದಿನಗಳಲ್ಲಿ ನಡೆಸುವಂತೆ ಆಪ್ ಪಕ್ಷವು ಆಗ್ರಹಿಸಿತ್ತು. ಆದರೆ ಚುನಾವಣಾ ಆಯೋಗವು ಈ ಎರಡು ರಾಜ್ಯಗಳ ಚುನಾವಣೆಗಳನ್ನು ಒಂದೇ ದಿನಕ್ಕೆ (ಫೆ.4) ನಿಗದಿಪಡಿಸಿದೆ.
ಅದಾಗ್ಯೂ ಗೋವಾ ಹಾಗೂ ಪಂಜಾಬ್’ನಲ್ಲಿ ತಮ್ಮ ಪಕ್ಷವು ಗೆಲುವು ಸಾಧಿಸಲಿದೆ ಎಂದು ಪಕ್ಷವು ಹೆಳಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.