
ಬೆಂಗಳೂರು : ಮುಂದಿನ ಲೊಕಸಭಾ ಚುನಾವಣೆಯಲ್ಲಿ ಬೆಂಗಳೂರಿನ ಸೆಂಟ್ರಲ್ ಕೇಂದ್ರದಿಂದ ಸ್ಪರ್ಧೆ ಮಾಡಲು ಬಯಸಿರುವ ನಟ ಪ್ರಕಾಶ್ ರಾಜ್ ಗೆ ಆಮ್ ಆದ್ಮಿ ಪಕ್ಷ ಬೆಂಬಲ ಘೋಷಿಸಿದೆ.
ಮನೀಷ್ ಸಿಸೋಡಿಯಾ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಕಾಶರ್ಶ ರಾಜ್ ಕೂಡ ಪಾಲ್ಗೊಂಡಿದ್ದರು.
ಈ ವೇಳೆ ಮಾತನಾಡಿದ ಪ್ರಕಾಶ್ ರಾಜ್ ನಾನು ಈ ವರೆಗೂ ಮಾಧ್ಯಮಗಳ ಮೂಲಕ ಅನೇಕ ಪ್ರಶ್ನೆಗಳನ್ನು ಕೇಳಿದ್ದೇನೆ. ಇದೀಗ ಸಂಸತ್ತಿನಲ್ಲಿ ಕೇಳುವ ವಿಷಯ ಪ್ರಸ್ತಾಪಿಸುವ ಸಂದರ್ಭ ಎದುರಾಗಿದೆ.
ಹೀಗಾಗಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ನಿರ್ಧರಿಸಿದ್ದೇನೆ. ಈ ವೇಳೆ ಎಎಪಿ ಎಂಬಲ ಸಿಕ್ಕರೆ ಹೆಚ್ಚು ಸಂತೋಷವಾಗುತ್ತದೆ ಎಂದರು. ಈ ವೇಳೆ ಸಿಸೋಡಿಯಾ ಬೆಂಬಲ ನೀಡುವುದಾಗಿ ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.