ಇನ್ನು ಮೋದಿ ಟೀಕೆ ಬಿಟ್ಟು ಸಕಾರಾತ್ಮಕ ಪ್ರಚಾರಕ್ಕೆ ಆಮ್‌ಆದ್ಮಿ ಪಕ್ಷ ನಿರ್ಧಾರ!

Published : Apr 15, 2017, 06:28 AM ISTUpdated : Apr 11, 2018, 01:08 PM IST
ಇನ್ನು ಮೋದಿ ಟೀಕೆ ಬಿಟ್ಟು ಸಕಾರಾತ್ಮಕ ಪ್ರಚಾರಕ್ಕೆ ಆಮ್‌ಆದ್ಮಿ ಪಕ್ಷ ನಿರ್ಧಾರ!

ಸಾರಾಂಶ

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ನೇರವಾಗಿ ದಾಳಿ ನಡೆಸುವುದಕ್ಕೆ ಬದಲಾಗಿ, ಧನಾತ್ಮಕ ಪ್ರಚಾರದಲ್ಲಿ ತೊಡಗಿಸಿಕೊಳ್ಳಲು ಆಪ್‌ ನಿರ್ಧರಿ​ಸಿದೆ.

ನವದೆಹಲಿ: ಗೋವಾ ಮತ್ತು ಪಂಜಾಬ್‌ ವಿಧಾನ​ಸಭಾ ಚುನಾವಣೆಯಲ್ಲಿ ಉತ್ತಮ ಫಲಿತಾಂಶ ಕಂಡುಕೊಳ್ಳಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಆಮ್‌ ಆದ್ಮಿ ಪಕ್ಷ ತನ್ನ ಭವಿಷ್ಯದ ಕಾರ್ಯತಂತ್ರ ಬದಲಾಯಿಸಲು ನಿರ್ಧರಿಸಿದೆ.

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ನೇರವಾಗಿ ದಾಳಿ ನಡೆಸುವುದಕ್ಕೆ ಬದಲಾಗಿ, ಧನಾತ್ಮಕ ಪ್ರಚಾರದಲ್ಲಿ ತೊಡಗಿಸಿಕೊಳ್ಳಲು ಆಪ್‌ ನಿರ್ಧರಿ​ಸಿದೆ.

ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಅಗ್ನಿ ಪರೀಕ್ಷೆ ಎದುರಿಸುತ್ತಿರುವ ಆಪ್‌ ಧನಾತ್ಮಕ ಪ್ರಚಾರದಲ್ಲಿ ತೊಡಗಿಸಿಕೊಳ್ಳಲು ನಿರ್ಧರಿಸಿದೆ. ‘49 ದಿನಗಳ ಸರ್ಕಾರದಲ್ಲಿ ಮಾಡಿದ ಧನಾತ್ಮಕ ಕಾರ್ಯಗಳ ಬಗ್ಗೆ ಮನವರಿಕೆ ಮಾಡಿದ್ದ 2015ರ ವಿಧಾನ​ಸಭಾ ಚುನಾವಣೆಯಲ್ಲಿ ಬಳಸಿದ ತಂತ್ರಗಾರಿಕೆಯನ್ನೇ ನಾವು ಹೊಂದಲಿದ್ದೇವೆ. ಎಂದು ಪಕ್ಷದ ನಾಯಕರೊಬ್ಬರು ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಾಜಕೀಯ ಪಕ್ಷಗಳಿಗೆ ₹3811 ಕೋಟಿ ಫಂಡ್‌: ಬಿಜೆಪಿಗೇ 82%!
ಕಾಂಗ್ರೆಸ್‌ನಿಂದ ದೇಶ ವಿರೋಧಿ ಚಟುವಟಿಕೆ : ಮೋದಿ ಮತ್ತೆ ತರಾಟೆ