ಪ್ರಧಾನಿ ನರೇಂದ್ರ ಮೋದಿ ವಿರುದ್ಧ ನೇರವಾಗಿ ದಾಳಿ ನಡೆಸುವುದಕ್ಕೆ ಬದಲಾಗಿ, ಧನಾತ್ಮಕ ಪ್ರಚಾರದಲ್ಲಿ ತೊಡಗಿಸಿಕೊಳ್ಳಲು ಆಪ್ ನಿರ್ಧರಿಸಿದೆ.
ನವದೆಹಲಿ: ಗೋವಾ ಮತ್ತು ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಉತ್ತಮ ಫಲಿತಾಂಶ ಕಂಡುಕೊಳ್ಳಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಆಮ್ ಆದ್ಮಿ ಪಕ್ಷ ತನ್ನ ಭವಿಷ್ಯದ ಕಾರ್ಯತಂತ್ರ ಬದಲಾಯಿಸಲು ನಿರ್ಧರಿಸಿದೆ.
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ನೇರವಾಗಿ ದಾಳಿ ನಡೆಸುವುದಕ್ಕೆ ಬದಲಾಗಿ, ಧನಾತ್ಮಕ ಪ್ರಚಾರದಲ್ಲಿ ತೊಡಗಿಸಿಕೊಳ್ಳಲು ಆಪ್ ನಿರ್ಧರಿಸಿದೆ.
ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಅಗ್ನಿ ಪರೀಕ್ಷೆ ಎದುರಿಸುತ್ತಿರುವ ಆಪ್ ಧನಾತ್ಮಕ ಪ್ರಚಾರದಲ್ಲಿ ತೊಡಗಿಸಿಕೊಳ್ಳಲು ನಿರ್ಧರಿಸಿದೆ. ‘49 ದಿನಗಳ ಸರ್ಕಾರದಲ್ಲಿ ಮಾಡಿದ ಧನಾತ್ಮಕ ಕಾರ್ಯಗಳ ಬಗ್ಗೆ ಮನವರಿಕೆ ಮಾಡಿದ್ದ 2015ರ ವಿಧಾನಸಭಾ ಚುನಾವಣೆಯಲ್ಲಿ ಬಳಸಿದ ತಂತ್ರಗಾರಿಕೆಯನ್ನೇ ನಾವು ಹೊಂದಲಿದ್ದೇವೆ. ಎಂದು ಪಕ್ಷದ ನಾಯಕರೊಬ್ಬರು ಹೇಳಿದ್ದಾರೆ.