
ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅಲ್ಲಿನ ಉಪರಾಜ್ಯಪಾಲರ ಮನೆಯಲ್ಲಿ ಪ್ರತಿಭಟನೆ ನಿರತರಾಗಿರುವ ನಡುವೆ, ಭಾನುವಾರ ಆಪ್ ಕಾರ್ಯಕರ್ತರು ಪ್ರಧಾನಿ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು.
ಐಎಎಸ್ ಅಧಿಕಾರಿಗಳು ತಮ್ಮ ಪ್ರತಿಭಟನೆ ನಿಲ್ಲಿಸಲು ನಿರ್ದೇಶಿಸುವಂತೆ ಒತ್ತಾಯಿಸಿ, ಉಪರಾಜ್ಯಪಾಲ ಅನಿಲ್ ಬೈಜಾಲ್ ನಿವಾಸದಲ್ಲಿ ಸಿಎಂ ಕೇಜ್ರಿವಾಲ್ ನೇತೃತ್ವದಲ್ಲಿ ಆರು ದಿನಗಳಿಂದ ಧರಣಿ ನಡೆಯುತ್ತಿದೆ.
ಈ ನಡುವೆ, ಭಾನುವಾರ ಆಪ್ ಕಾರ್ಯಕರ್ತರು ಕೇಜ್ರಿವಾಲ್ ಬೆಂಬಲಕ್ಕೆ ನಿಂತು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆಗೆ ಸಿಪಿಎಂ ನಾಯಕರು ಕೂಡಾ ಭಾಗವಹಿಸುವ ಮೂಲಕ ಬೆಂಬಲ ವ್ಯಕ್ತಪಡಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.