ಲೋಕಸಭಾ ಚುನಾವಣೆ : ಯುಪಿಎ ಒಕ್ಕೂಟ ಸೇರಲ್ಲ ಎಂದ ಕೇಜ್ರಿ

Published : Aug 10, 2018, 11:41 AM ISTUpdated : Aug 10, 2018, 11:42 AM IST
ಲೋಕಸಭಾ ಚುನಾವಣೆ : ಯುಪಿಎ ಒಕ್ಕೂಟ ಸೇರಲ್ಲ ಎಂದ ಕೇಜ್ರಿ

ಸಾರಾಂಶ

ಮುಂದಿನ ಲೋಕಸಭಾ ಚುನಾವಣೆಯಲ್ಲಿ ವಿಪಕ್ಷಗಳ ಒಕ್ಕೂಟದೊಂದಿಗೆ ಕೈ ಜೋಡಿಸುವುದಿಲ್ಲ ಎಂದು ಆಮ್ ಆದ್ಮಿ ಮುಖಂಡ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. 

ರೋಹ್ ಟಕ್ :  ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು ವಿವಿಧ ಪಕ್ಷಗಳು ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುತ್ತಿವೆ. ವಿವಿಧ ಪಕ್ಷಗಳನ್ನು ಸೆಳೆಯಲು ಪ್ರಬಲ ಪಕ್ಷಗಳಲ್ಲಿ ಪೈಪೋಟಿ ನಡೆಯುತ್ತಿದೆ. 

ಈಗಾಗಲೇ ಎನ್ ಡಿಎ ಹಾಗೂ ಯುಪಿಎ ಒಕ್ಕೂಟಗಳಲ್ಲಿ ಗೆಲುವಿಗಾಗಿ ಮಾಸ್ಟರ್ ಪ್ಲಾನ್ ಗಳನ್ನು ಮಾಡಿಕೊಳ್ಳಲಾಗುತ್ತಿದೆ. 2 ಒಕ್ಕೂಟಗಳಲ್ಲಿಯೂ ಕೂಡ ದೇಶದ ಚುಕ್ಕಾಣಿ ಹಿಡಿಯಲು ಸ್ಪರ್ಧೆ ನಡೆಸುತ್ತಿವೆ. 

ಇದೀಗ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಪ್ 2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ವಿಪಕ್ಷ ಒಕ್ಕೂಟದಲ್ಲಿ ಸೇರುವುದಿಲ್ಲ ಎಂದು ಹೇಳಿಕೊಂಡಿದೆ. 

ಆಮ್ ಆದ್ಮಿ ಪಕ್ಷವು ಯಾವುದೇ ಒಕ್ಕೂಟದಲ್ಲಿಯೂ ಸೇರಿ ಚುನಾವಣೆ ಎದುರಿಸುವುದಿಲ್ಲ ಎಂದು ಅವರು ಹೇಳಿದ್ದಾರೆ. 

ಅಲ್ಲದೇ ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧವೂ ಕೂಡ ವಾಗ್ದಾಳಿ ನಡೆಸಿದ್ದು,  ದಿಲ್ಲಿಯಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಬಾಕಿ ಉಳಿಸಲಾಗಿದೆ. ಆದರೆ ತಮ್ಮ ಸರ್ಕಾರ ಮಾತ್ರವೇ ಜನರ ಅಭಿವೃದ್ಧಿಗಾಗೀ ಕೆಲಸ ಮಾಡುತ್ತಿರುವುದಾಗಿ ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಿಜಿಪಿಯಾಗಿ ಅಲೋಕ್‌ ಕುಮಾರ್ ಮುಂಬಡ್ತಿ, ಸರ್ಕಾರದ ವಿರುದ್ಧ 8 ತಿಂಗಳ ಕಾನೂನು ಹೋರಾಟಕ್ಕೆ ಜಯ!
ರಾಮನಗರ: ರಸ್ತೆಗೆ ಕುರಿಗಳು ಅಡ್ಡಿ, ಹಾರ್ನ್ ಮಾಡಿದ್ದಕ್ಕೆ ಬಸ್ ಚಾಲಕನ ಮೇಲೆ ಗ್ರಾಮಸ್ಥರಿಂದ ಹಲ್ಲೆ!