
ನವದೆಹಲಿ[ಆ.24]: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಆಡಳಿತವು ಸಂಪೂರ್ಣ ಋುಣಾತ್ಮಕವಾಗಿಲ್ಲ. ಪ್ರತಿಯೊಂದಕ್ಕೂ ಮೋದಿ ಅವರನ್ನು ಟೀಕಿಸುವುದು ಸರಿಯಲ್ಲ. ಅವರ ಉತ್ತಮ ಕಾರ್ಯ ವೈಖರಿ ಬಗ್ಗೆಯೂ ಮೆಚ್ಚುಗೆ ವ್ಯಕ್ತಪಡಿಸಬೇಕೆಂಬ ಕರ್ನಾಟಕದ ರಾಜ್ಯಸಭೆ ಸದಸ್ಯ ಹಾಗೂ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಅವರ ಹೇಳಿಕೆಯನ್ನು ಕಾಂಗ್ರೆಸ್ನ ಇತರ ಇಬ್ಬರು ಮುಖಂಡರು ಸಮರ್ಥಿಸಿದ್ದಾರೆ.
ಮೋದಿ ಜನರ ಪ್ರಧಾನಿ: ಬದಲಾಗ್ತಿದೆ ಕೈ ನಾಯಕರ ಧ್ವನಿ!
ಪ್ರಧಾನಿ ಮೋದಿ ಅವರು ಕೈಗೊಳ್ಳುವ ವಿಚಾರಗಳಿಗನುಸಾರವಾಗಿ ಟೀಕೆ- ಟಿಪ್ಪಣಿ ಮಾಡಬೇಕೇ ಹೊರತು, ವ್ಯಕ್ತಿಯಾಧಾರಿತ ಟೀಕೆ ತಪ್ಪು ಎಂದು ಕಾಂಗ್ರೆಸ್ ನಾಯಕ ಅಭಿಷೇಕ್ ಮನುಸಿಂಘ್ವಿ ಹೇಳಿದರೆ, ಉತ್ತಮ ಕ್ರಮ ಕೈಗೊಳ್ಳುವ ಬಗ್ಗೆ ಪ್ರಧಾನಿ ಅವರನ್ನು ಶ್ಲಾಘಿಸಿದರೆ, ಪ್ರತಿಪಕ್ಷಗಳ ಘನತೆ ಹೆಚ್ಚುತ್ತದೆ. ಅಲ್ಲದೆ, ಪ್ರತಿಪಕ್ಷಗಳ ವಿಮರ್ಶೆಗೆ ಮಹತ್ವ ಹೆಚ್ಚುತ್ತದೆ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.