ಸಿದ್ದರಾಮಯ್ಯ ಪುತ್ರಗೆ ಸಡ್ಡು ಹೊಡೆಯಲು ಸ್ವಕ್ಷೇತ್ರದಲ್ಲಿ ಜೆಡಿಎಸ್ ಪ್ಲಾನ್ ಏನು..?

By Suvarna Web DeskFirst Published Mar 6, 2018, 1:12 PM IST
Highlights

ಸಿಎಂ ಸ್ವ ಕ್ಷೇತ್ರ ವರುಣಾದಲ್ಲಿ ಜೆಡಿಎಸ್ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದೆ.  ವರುಣಾ ಕ್ಷೇತ್ರದಲ್ಲಿ ಸಂಭವನೀಯ ಅಭ್ಯರ್ಥಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಯತೀಂದ್ರಗೆ ಟಾಂಗ್ ನೀಡಲು ಹೊಸ ಅಭ್ಯರ್ಥಿಯನ್ನು ಸಜ್ಜು ಮಾಡಿದೆ. ಅಭಿಷೇಕ್ ಎನ್ನುವವರಿಗೆ ಜೆಡಿಎಸ್ ಟಿಕೆಟ್ ನೀಡಿದೆ.

ಮೈಸೂರು : ಸಿಎಂ ಸ್ವ ಕ್ಷೇತ್ರ ವರುಣಾದಲ್ಲಿ ಜೆಡಿಎಸ್ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದೆ.  ವರುಣಾ ಕ್ಷೇತ್ರದಲ್ಲಿ ಸಂಭವನೀಯ ಅಭ್ಯರ್ಥಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಯತೀಂದ್ರಗೆ ಟಾಂಗ್ ನೀಡಲು ಹೊಸ ಅಭ್ಯರ್ಥಿಯನ್ನು ಸಜ್ಜು ಮಾಡಿದೆ. ಅಭಿಷೇಕ್ ಎನ್ನುವವರಿಗೆ ಜೆಡಿಎಸ್ ಟಿಕೆಟ್ ನೀಡಿದೆ.

ಈ ಬಗ್ಗೆ ಮಾತನಾಡಿದ ಜೆಡಿಎಸ್ ಅಭ್ಯರ್ಥಿಯಾಗಿರುವ ಅಭಿಷೇಕ್ ಈ ಕ್ಷೇತ್ರದಲ್ಲಿ ಅಭಿವೃದ್ಧಿ ಎನ್ನುವುದು ಮರೀಚಿಕೆಯಾಗಿದೆ. 2018ನೇ ಸಾಲಿನ ಚುನಾವಣೆಯಲ್ಲಿ ವರುಣಾದಲ್ಲಿ ಅಚ್ಚರಿ ಫಲಿತಾಂಶ ಬರಲಿದೆ ಎಂದು ಹೇಳಿದ್ದಾರೆ.  ಕುಮಾರಸ್ವಾಮಿ 20 ತಿಂಗಳ ಆಡಳಿತ ನನಗೆ ಶ್ರೀ ರಕ್ಷೆಯಾಗಿದೆ. ಇಲ್ಲಿನ ಜನ ನನಗೆ ಆಶಿರ್ವಾದ ಮಾಡಲಿದ್ದಾರೆ ಎಂದು ಅವರು ಹೇಳಿದ್ದಾರೆ.

click me!