ಹಿನ್ನಡೆ ನಿವಾರಿಸುವ ಸಾಮರ್ಥ್ಯ ನಮ್ಮೊಳಗೇ ಇದೆ: ಮೋದಿ!

Published : Jul 28, 2019, 02:14 PM IST
ಹಿನ್ನಡೆ ನಿವಾರಿಸುವ ಸಾಮರ್ಥ್ಯ ನಮ್ಮೊಳಗೇ ಇದೆ: ಮೋದಿ!

ಸಾರಾಂಶ

ಪ್ರಧಾನಿ ಮೋದಿ ಅವರ ಎರಡನೇ ಮನ್ ಕಿ ಬಾತ್ ಕಾರ್ಯಕ್ರಮ| ಚಂದ್ರಯಾನ-2 ಯೋಜನೆಯ ಯಶಸ್ವಿಗೆ ಶ್ರಮಿಸಿದ ಎಲ್ಲರಿಗೂ ಧನ್ಯವಾದ ಎಂದ ಪಿಎಂ| ‘ಹಿನ್ನಡೆ ನಿವಾರಿಸಿ ಮತ್ತೆ ಗುರಿಯತ್ತ ಮುನ್ನುಗ್ಗುವ ಸಾಮರ್ಥ್ಯ ನಮ್ಮೊಳಗಿದೆ ಎಂದ ಮೋದಿ| ಬಂದೂಕು, ಬಾಂಬ್’ಗಳಿಗಿಂತ ಅಭಿವೃದ್ಧಿ ಹೆಚ್ಚು ಶಕ್ತಿಯುತವಾಗಿರುತ್ತದೆ ಎಂದ ಪ್ರಧಾನಿ| ಹಿಂಸಾ ಮಾರ್ಗ ಬಿಟ್ಟು ಅಭಿವೃದ್ಧಿ ಮಾರ್ಗ ಆಯ್ದುಕೊಳ್ಳುವಂತೆ ಕರೆ| 

ನವದೆಹಲಿ(ಜು.28): ಜೀವನದಲ್ಲಿ ಎದುರಾಗುವ ಹಿನ್ನಡೆ ನಿವಾರಿಸಿ ಮತ್ತೆ ಗುರಿಯತ್ತ ಮುನ್ನುಗ್ಗುವ ಸಾಮರ್ಥ್ಯ ನಮ್ಮೊಳಗೇ ಇರುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ತಮ್ಮ ಎರಡನೇ ಅವಧಿಯ ಎರಡನೇ ಮನ ಕೀ ಬಾತ್ ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಎಲ್ಲ ಅಡೆತಡೆಗಳನ್ನು ನಿವಾರಿಸಿ ಚಂದ್ರಯಾನ-2 ಯಶಸ್ವಿಯಾಗಿರುವುದನ್ನು ಉಲ್ಲೇಖಿಸಿದರು.

ಚಂದ್ರಯಾನ-2ಯಶಸ್ವಿ ನಿಜಕ್ಕೂ ಭಾರತದ ಸಾಮರ್ಥ್ಯಕ್ಕೆ ಹಿಡಿದ ಕನ್ನಡಿಯಾಗಿದ್ದು, ಈ ಯೋಜನೆಯ ಯಶಸ್ವಿಗೆ ಶ್ರಮಿಸಿದ ಪ್ರತಿಯೊಬ್ಬರಿಗೂ ಧನ್ಯವಾದ ಸಲ್ಲಿಸುವುದಾಗಿ ಪ್ರಧಾನಿ ನುಡಿದರು.

ಚಂದ್ರಯಾನ-2 ಆರಂಭಿಕ ಹಂತದಲ್ಲಿ ಅಡೆತಡೆ ಎದುರಾದರೂ ಅಂತಿಮವಾಗಿ ಯೋಜನೆ ಯಶಸ್ವಿಯಾದಂತೆ, ಜೀವನದಲ್ಲಿ ಎದುರಾಗುವ ಎಲ್ಲಾ ಕಷ್ಟಗಳನ್ನು ನಿವಾರಿಸಿ ಯಶಸ್ವಿಯಾಗುವ ಸಾಮರ್ಥ್ಯ ಪ್ರತಿಯೊಬ್ಬರ ಬಳಿ ಇರುತ್ತದೆ ಎಂದು ಮೋದಿ ಹೇಳಿದರು.

ಇದೇ ವೇಳೆ ಕಾಶ್ಮೀರ ವಿಷಯ ಪ್ರಸ್ತಾಪಿಸಿದ ಪ್ರಧಾನಿ ಮೋದಿ, ಕಣಿವೆಯಲ್ಲಿ ಹಿಂಸಾಚಾರಕ್ಕೆ ಪ್ರಚೋದನೆ ನೀಡುವವರು ದೇಶವನ್ನು ಅಸ್ಥಿರಗೊಳಿಸಲು ಯತ್ನಿಸುತ್ತಿದ್ದು ಅವರ ಯೋಜನೆ ಯಶಸ್ವಿಯಾಗಲು ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಬಂದೂಕು, ಬಾಂಬ್’ಗಳಿಗಿಂತ ಅಭಿವೃದ್ಧಿ ಹೆಚ್ಚು ಶಕ್ತಿಯುತವಾಗಿರುತ್ತದೆ ಎಂದ ಪ್ರಧಾನಿ, ಹಿಂಸೆಯ ಮಾರ್ಗ ಬಿಟ್ಟು ಅಭಿವೃದ್ಧಿ ಮಾರ್ಗ ಆಯ್ದುಕೊಳ್ಳುವಂತೆ ಕರೆ ನೀಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸೌಟು, ಕುಕ್ಕರ್ ಹಿಡಿದು ನಿಲ್ಲಿ, SIR ವಿರುದ್ಧ ಹೋರಾಟಕ್ಕೆ ಮಹಿಳೆಯರಿಗೆ ಸಿಎಂ ಮಮತಾ ಬ್ಯಾನರ್ಜಿ ಕರೆ
ಮೈಸೂರು ಅರಮನೆ ವರಹ ದ್ವಾರದ ಮೇಲ್ಛಾವಣಿ ಕುಸಿತ; ಪ್ರವಾಸಿಗರ ಗೈರಿನಿಂದ ತಪ್ಪಿದ ಭಾರೀ ಅನಾಹುತ