ಆರೋಪದಿಂದ ನುಣುಚಿಕೊಳ್ಳುವ ಪ್ರಯತ್ನ: ಬಸವರಾಜೇಂದ್ರ ಹೇಳಿಕೆ ಬಗ್ಗೆ ಎಂ.ಎನ್. ರೆಡ್ಡಿ

Published : Aug 20, 2017, 04:06 PM ISTUpdated : Apr 11, 2018, 12:47 PM IST
ಆರೋಪದಿಂದ ನುಣುಚಿಕೊಳ್ಳುವ ಪ್ರಯತ್ನ: ಬಸವರಾಜೇಂದ್ರ ಹೇಳಿಕೆ ಬಗ್ಗೆ ಎಂ.ಎನ್. ರೆಡ್ಡಿ

ಸಾರಾಂಶ

ನೋಟಿಫಿಕೇಷನ್​​ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳ ಮೇಲೆ ಒತ್ತಡ ಹೇರಿ ಹೇಳಿಕೆ ಪಡೆಯಲಾಗಿದೆ ಎಂಬ ಕೆಎಎಸ್ ಅಧಿಕಾರಿ ಬಸವರಾಜೇಂದ್ರ ಆರೋಪವನ್ನು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ತಳ್ಳಿಹಾಕಿದೆ. ಬಸವರಾಜೇಂದ್ರ ಆರೋಪವನ್ನು ತಳ್ಳಿಹಾಕಿದ ಎಸಿಬಿ ಡಿಜಿಪಿ ಎಂ.ಎನ್​ ರೆಡ್ಡಿ, ಯಾರ ಒತ್ತಡವೂ ಇಲ್ಲದೇ ಹೇಳಿಕೆ ದಾಖಲಿಸಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಬೆಂಗಳೂರು: ಡಿನೋಟಿಫಿಕೇಷನ್​​ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳ ಮೇಲೆ ಒತ್ತಡ ಹೇರಿ ಹೇಳಿಕೆ ಪಡೆಯಲಾಗಿದೆ ಎಂಬ ಕೆಎಎಸ್ ಅಧಿಕಾರಿ ಬಸವರಾಜೇಂದ್ರ ಆರೋಪವನ್ನು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ತಳ್ಳಿಹಾಕಿದೆ.

ಬಸವರಾಜೇಂದ್ರ ಆರೋಪವನ್ನು ತಳ್ಳಿಹಾಕಿದ ಎಸಿಬಿ ಡಿಜಿಪಿ ಎಂ.ಎನ್​ ರೆಡ್ಡಿ, ಯಾರ ಒತ್ತಡವೂ ಇಲ್ಲದೇ ಹೇಳಿಕೆ ದಾಖಲಿಸಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಯಾವುದೇ ಆರೋಪಿ ನ್ಯಾಯಾಧೀಶರ ಮುಂದೆ ಹೇಳಿಕೆ ನೀಡಲು ಅವಕಾಶ ಇಲ್ಲ, ಒತ್ತಾಯ ಮಾಡಿದರೆ ಮೇಲಧಿಕಾರಿಗಳಿಗೆ ದೂರು ನೀಡಲು ಅವಕಾಶವಿತ್ತು, ಈಗಲೂ ಎಸಿಬಿ ಮೇಲಧಿಕಾರಿಗಳಿಗೆ ದೂರು ಸಲ್ಲಿಸಿದ್ರೆ ಕ್ರಮ ಜರುಗಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಈ ರೀತಿ ಹೇಳಿಕೆ ನೀಡುತ್ತಿರುವುದು ಆರೋಪದಿಂದ ನುಣುಚಿಕೊಳ್ಳುವ ಪ್ರಯತ್ನವಾಗಿದೆ ಎಂದು ಅವರು ಹೇಳಿದ್ದಾರೆ.

ಡಿನೋಟಿಫಿಕೇಷನ್​​ ಸಂಬಂಧ ಅಧಿಕಾರಿಗಳ ಮೇಲೆ ಒತ್ತಡ ಹೇರಿ ಹೇಳಿಕೆ ಪಡೆದು ಬಿಎಸ್ ಯಡಿಯೂರಪ್ಪ ವಿರುದ್ಧ ಎಫ್​ಐಆರ್​ ದಾಖಲಿಸಿದೆ. ಒತ್ತಡಕ್ಕೆ ಮಣಿಯದ ಅಧಿಕಾರಿಯನ್ನ 2ನೇ ಆರೋಪಿಯಾಗಿಸಿ ಎಫ್​ಐಆರ್​ ದಾಖಲಿಸಿದೆ, ಎಂದು ಕೆಎಎಸ್​ ಅಧಿಕಾರಿ ಬಸವರಾಜೇಂದ್ರ ಎಸಿಬಿ ಅಧಿಕಾರಿಗಳ ವಿರುದ್ಧ ಸಿಡಿದೆದ್ದಿದ್ದು, ರಾಜ್ಯಪಾಲರಿಗೆ, ಮುಖ್ಯ ಕಾರ್ಯದರ್ಶಿಗಳಿಗೆ ದೂರು ನೀಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬಾಬರ್‌, ರಿಜ್ವಾನ್‌, ಶಾಹಿನ್‌ ಸೇರಿದಂತೆ 12ಕ್ಕೂ ಅಧಿಕ ಪಾಕ್‌ ಕ್ರಿಕೆಟಿಗರಿಗೆ 100 ಕೋಟಿ ವಂಚಿಸಿ ಎಸ್ಕೇಪ್‌ ಆದ ಉದ್ಯಮಿ!
ಪಿಂಚಣಿಯಿಂದ ಆರೋಗ್ಯ ವಿಮೆವರೆಗೆ.. ನಿವೃತ್ತಿಯ ನಂತರ ಸುನೀತಾ ವಿಲಿಯಮ್ಸ್‌ಗೆ ಪ್ರತಿ ತಿಂಗಳು ಸಿಗೋ ಹಣವೆಷ್ಟು?