
ಬೆಂಗಳೂರು(ಜ.09): ಬಗರ್ ಹುಕುಂ ಸಾಗುವಳಿ ಸಮಿತಿಯಿಂದ ಅಕ್ರಮ ಭೂಮಿ ಹಂಚಿಕೆ ಆರೋಪದಡಿ ಮಾಜಿ ಉಪಮುಖ್ಯಮಂತ್ರಿ ಆರ್. ಅಶೋಕ್ ವಿರುದ್ಧ ಎಸಿಬಿ ಅಧಿಕಾರಿಗಳು ಪ್ರಾಥಮಿಕ ತನಿಖಾ ವರದಿ (ಎಫ್'ಐಆರ್) ದಾಖಲಿಸಲಾಗಿದ್ದು, ಅವರನ್ನು ಬಂಧಿಸುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
ಭ್ರಷ್ಟಾಚಾರ ನಿಗ್ರಹ ಕಾಯ್ದೆ ಸೆ.13(1)(C), 13(1) (D), 13(2) ಐಪಿಸಿ 420, 120(ಬಿ)ಅಡಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ ಎಂದು ಎಸಿಬಿ ಅಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಬಗರ್ ಹುಕುಂ ಭೂ ಸಕ್ರಮಿಕರಣ ಸಮಿತಿ ಅಧ್ಯಕ್ಷರಾಗಿದ್ದ ಆರ್. ಅಶೋಕ್ ಅಕ್ರಮ ಭೂ ಹಂಚಿಕೆ ವಿಚಾರವಾಗಿ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಈಗಾಗಲೇ ತಹಶೀಲ್ದಾರ್ ರಾಮಚಂದ್ರಯ್ಯ ಸೇರಿದಂತೆ ಕಂದಾಯ ಅಧಿಕಾರಿ ಗವೀಗೌಡ, ಚೌಡೇಗೌಡ ಹಾಗೂ ಅಂದಿನ ಗ್ರಾಮಲೆಕ್ಕಿಗಾಧಿಕಾರಿ ಶಶಿಧ ವಿರುದ್ಧವೂ ಆರೋಪ ಕೇಳಿಬಂದಿತ್ತು. ಈಗಾಗಲೇ ಅವರನ್ನು ಎಸಿಬಿ ಅಧಿಕಾರಿಗಳು ನ್ಯಾಯಾಲಯದ ಮುಂದೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗಾಗಿ ಅವರನ್ನು ಪೊಲೀಸ್ ವಶಕ್ಕೆ ಪಡೆಯಲಾಗಿದೆ. ಹೀಗಾಗಿ ಮಾಜಿ ಡಿಸಿಎಂ ಅಶೋಕ್ ಅವರನ್ನು ಬಂಧಿಸುವ ಸಾಧ್ಯತೆಗಳನ್ನು ಅಲ್ಲಗಳೆಯುವಂತಿಲ್ಲ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.