ಭ್ರಷ್ಟ ಅಧಿಕಾರಿಗಳಿಗೆ ಎಸಿಬಿ ಶಾಕ್! ರಾಜ್ಯದ ವಿವಿಧೆಡೆ ಎಸಿಬಿ ದಾಳಿ

Published : Dec 21, 2016, 11:35 PM ISTUpdated : Apr 11, 2018, 01:10 PM IST
ಭ್ರಷ್ಟ ಅಧಿಕಾರಿಗಳಿಗೆ ಎಸಿಬಿ ಶಾಕ್! ರಾಜ್ಯದ ವಿವಿಧೆಡೆ ಎಸಿಬಿ ದಾಳಿ

ಸಾರಾಂಶ

ರಾಜ್ಯಾದ್ಯಂತ ವಿವಿಧ ಅಧಿಕಾರಿಗಳಿಗೆ ಬೆಳ್ಳಂಬೆಳಿಗ್ಗೆ ಎಸಿಬಿ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಎಲ್ಲೆಲ್ಲಿ ದಾಳಿ ನಡೆಸಿದ್ದಾರೆ ಇಲ್ಲಿದೆ ಡೀಟೇಲ್ಸ್.

ಬೆಂಗಳೂರು (ಡಿ.22): ರಾಜ್ಯಾದ್ಯಂತ ವಿವಿಧ ಅಧಿಕಾರಿಗಳಿಗೆ ಬೆಳ್ಳಂಬೆಳಿಗ್ಗೆ ಎಸಿಬಿ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಎಲ್ಲೆಲ್ಲಿ ದಾಳಿ ನಡೆಸಿದ್ದಾರೆ ಇಲ್ಲಿದೆ ಡೀಟೇಲ್ಸ್.

ಬೆಂಗಳೂರು

ಬಸವೇಶ್ವರ ನಗರದಲ್ಲಿರುವ  ಬಿಬಿಎಂಪಿ ಬಿಲ್ ಕಲೆಕ್ಟರ್ ನವೀನ್ ಮನೆ ಮೇಲೆ ದಾಳಿ ನಡೆದಿದೆ. ಅದೇ ರೀತಿ  ಮಹದೇವಪುರದಲ್ಲಿರುವ ಬಿಬಿಎಂಪಿ ಸಹಾಯಕ ನಿರ್ದೇಶಕ ಬಸವರಾಜು ಮನೆ ಮೇಲೆ ದಾಳಿ ನಡೆದಿದೆ.

ದಾವಣಗೆರೆ

ವಿವೇಕಾನಂದ ಬಡಾವಣೆಯಲ್ಲಿರುವ KRDL ಸಹಾಯಕ ಇಂಜಿನಿಯರ್ ಉಮೇಶ್ ಪಾಟೀಲ್ ಮನೆ ಮೇಲೆ ಎಸಿಬಿ ದಾಳಿ ನಡೆಸಿದ್ದಾರೆ. ಎಸ್​ಪಿ ಪುಟ್ಟಮಾದಯ್ಯ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.  

ಬೆಳ್ತಂಗಡಿ

ಗುರುವಾಯನಕೆರೆ ಗ್ರಾಮದಲ್ಲಿ ಇರುವ ತಾಲೂಕು ಕಚೇರಿ ಅಧಿಕಾರಿ ಗೋವಿಂದ ನಾಯ್ಕರ ಮನೆಗೂ ದಾಳಿ ಮಾಡಲಾಗಿದೆ.  ಗೋವಿಂದ ನಾಯ್ಕರ ಪತ್ನಿ ಲೀಲಾವತಿ ಪೂಂಜಾಲಕಟ್ಟೆ ಆರೋಗ್ಯಾಧಿಕಾರಿ. ಇಬ್ಬರ ವ್ಯವಹಾರ,  ದಾಖಲೆಪತ್ರವನ್ನು ಎಸಿಬಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಬಳ್ಳಾರಿ

ಕುವೆಂಪು ನಗರದ 1ನೇ ಕ್ರಾಸ್​ನಲ್ಲಿರುವ ಬಳ್ಳಾರಿ ಜಿಲ್ಲಾಸ್ಪತ್ರೆ ಪ್ರಾಂಶುಪಾಲರಾಗಿರುವ ಡಾ. ಪಂಪಾಪತಿ ನಿವಾಸದ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಚಿತ್ರದುರ್ಗ

ಮೊಳಕಾಲ್ಮೂರಿನ ಪಿಡಬ್ಲೂಡಿ ಇಂಜಿನಿಯರ್​ ಪುಟ್ಟಲಿಂಗಯ್ಯ ಮನೆ ಮೇಲೆ ದಾಳಿ ನಡೆಸಿ 30 ಸಾವಿರ ನಗದು ವಶಪಡಿಸಿಕೊಳ್ಳಲಾಗಿದೆ. ಅಧಿಕಾರಿಗಳು ಕಡತಗಳ ಪರಿಶೀಲನೆ  ನಡೆಸುತ್ತಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಎಚ್‌ಎಎಲ್‌ ಸ್ಥಾಪನಾ ದಿನ: ಭಾರತದ ಏರೋಸ್ಪೇಸ್‌ ಸಾಧನೆಯ 86 ವರ್ಷಗಳ ಸಂಭ್ರಮಾಚರಣೆ
70ರ ಹರೆಯದಲ್ಲಿ ಸಿಕ್ಕಿಂ ಸುಂದರಿಗೆ ಮನಸೋತ ಆನಂದ್ ಮಹೀಂದ್ರ,ಅವಳಂದಕ್ಕೆ ಕಳೆದುಹೋಗ್ತೀರಿ