
ಕಲಬುರಗಿ (ಫೆ.03): ಕಲಬುರಗಿಯ ಟ್ರಾಫಿಕ್ ಪೊಲೀಸ್ ಪೇದೆಯ ಮನೆಯ ಮೇಲೆ ಇಂದು ಎಸಿಬಿ ದಾಳಿ ನಡೆದಿದೆ.
ನಗರದ ಸುಪರ್ ಮಾರ್ಕೆಟ್ ಸಂಚಾರಿ ಪೊಲೀಸ್ ಠಾಣೆಯ ಪೇದೆ ಕನಕರೆಡ್ಡಿ ಎಂಬಾತನ ವಿರುದ್ಧ ಆದಾಯಕ್ಕೂ ಮೀರಿದ ಆಸ್ತಿ ಹೊಂದಿರುವ ಆರೋಪ ಕೇಳಿ ಬಂದಿದ್ದು, ಮನೆಯ ಮೇಲೆ ಎಸಿಬಿ ದಾಳಿ ನಡೆದಿದೆ.
ಕಲಬುರಗಿ ನಗರದ ರಾಘವೇಂದ್ರ ಕಾಲೋನಿಯ ಅಗ್ರಿಕಲ್ಚರ್ ಲೇಔಟನಲ್ಲಿನ ಮನೆಯ ಮೇಲೆ ಬೆಳಂಬೆಳಿಗ್ಗೆ ದಾಳಿ ನಡೆದಿದ್ದು, ದಾಖಲೆ ಪರಿಶೀಲನೆ ಮುಂದುವರೆದಿದೆ.
ಪೇದೆ ಕನಕರೆಡ್ಡಿ , ಕಲಬುರಗಿಯಲ್ಲಿ ಮರಳು ಮಾಫಿಯಾ ಜೊತೆ ಶಾಮೀಲಾಗಿ ಅಕ್ರಮ ಆಸ್ತಿ ಗಳಿಸಿದ್ದಾನೆ ಎನ್ನುವ ಆರೋಪಗಳು ಕೇಳಿಬಂದಿದ್ವು. ಇದಕ್ಕೆ ಪೂರಕ ವೆಂಬಂತೆ ಎರಡಂತಸ್ತಿನ ಮನೆ, ಎರಡು ಮರಳು ಸಾಗಾಣಿಕೆಯ ಟಿಪ್ಪರ್’ಗಳು, ಒಂದು ನಿವೇಶನ ಸೇರಿ ಕೋಟಿಗಟ್ಟಲೆ ಬೆಲೆ ಬಾಳುವ ಆಸ್ತಿಪಾಸ್ತಿ ಪತ್ತೆಯಾಗಿವೆ.
ಎಸಿಬಿ ಎಸ್ಪಿ ಅನಿತಾ ಹದ್ದಣ್ಣನವರ್ ನೇತೃತ್ವದಲ್ಲಿ ದಾಳಿ ನಡೆದಿದ್ದು ದಾಖಲೆ ಪತ್ರಗಳ ಪರಿಶೀಲನೆ ಮುಂದುವರೆದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.