ಚಾರ್ಮಾಡಿ ಬಳಿ ಪ್ರಪಾತಕ್ಕೆ ಬಿದ್ದ ಬಸ್: 3 ಸಾವು, ಹಲವರಿಗೆ ಗಾಯ

Published : May 16, 2017, 04:25 PM ISTUpdated : Apr 11, 2018, 12:39 PM IST
ಚಾರ್ಮಾಡಿ ಬಳಿ ಪ್ರಪಾತಕ್ಕೆ ಬಿದ್ದ ಬಸ್: 3 ಸಾವು, ಹಲವರಿಗೆ ಗಾಯ

ಸಾರಾಂಶ

ಬಸ್'ನಲ್ಲಿ 40ಕ್ಕೂ ಹೆಚ್ಚು ಮಂದಿ ಪ್ರಯಾಣಿಸುತ್ತಿದ್ದರು. ಗಾಯಗೊಂಡವರನ್ನು ಸ್ಥಳೀಯರು ಹಾಗೂ ಪೊಲೀಸರು ರಕ್ಷಿಸುತ್ತಿದ್ದು, ಬೆಳ್ತಂಗಡಿ ಆಸ್ಪತ್ರೆಗೆ ಸೇರಿಸಲಾಗುತ್ತದೆ.

ದಕ್ಷಿಣ ಕನ್ನಡ(ಮೇ.16): ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟ್ ಬಳಿ ಕೇರಳದ ಖಾಸಗಿ ಬಸ್​ ನಿಯಂತ್ರಣ ತಪ್ಪಿ‌ ಪ್ರಪಾತಕ್ಕೆ ಬಿದ್ದು ಮೂವರು ಮೃತಪಟ್ಟು,ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ. ಘಾಟ್'ನ ಮೂರನೇ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಬಸ್ ಪ್ರಪಾತಕ್ಕೆ ಉರುಳಿದೆ.

ಬಸ್'ನಲ್ಲಿ 40ಕ್ಕೂ ಹೆಚ್ಚು ಮಂದಿ ಪ್ರಯಾಣಿಸುತ್ತಿದ್ದರು. ಗಾಯಗೊಂಡವರನ್ನು ಸ್ಥಳೀಯರು ಹಾಗೂ ಪೊಲೀಸರು ರಕ್ಷಿಸುತ್ತಿದ್ದು, ಬೆಳ್ತಂಗಡಿ ಆಸ್ಪತ್ರೆಗೆ ಸೇರಿಸಲಾಗುತ್ತದೆ. ಚಾರ್ಮಾಡಿ ಘಾಟ್​ನ ಮೂರನೇ ತಿರುವಿನಲ್ಲಿ ಈ ಅವಘಡ ಸಂಭವಿಸಿದ್ದು ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಶತ್ರುಗಳನ್ನು ಕ್ಷಮಿಸುವುದಕ್ಕೇ ಹುಟ್ಟಿದ ಯೇಸು.. ಒಳ್ಳೆಯದಕ್ಕೆ ಸಿಕ್ಕಿದ್ದು ಶಿಕ್ಷೆ ಮಾತ್ರ!
ತಮಿಳುನಾಡು ಹೆದ್ದಾರಿಯಲ್ಲೂ ಚಿತ್ರದುರ್ಗ ಮಾದರಿ ದುರಂತ, ಸರ್ಕಾರಿ ಬಸ್‌ ಪಂಚರ್‌ ಆಗಿ 9 ಮಂದಿ ಸಾವು!