ಚಿತ್ರದುರ್ಗದ ಬಳಿ ಭೀಕರ ಅಪಘಾತ : 11 ಮಂದಿ ಸ್ಥಳದಲ್ಲೇ ಸಾವು

Published : Mar 18, 2017, 08:23 AM ISTUpdated : Apr 11, 2018, 12:56 PM IST
ಚಿತ್ರದುರ್ಗದ ಬಳಿ ಭೀಕರ ಅಪಘಾತ : 11 ಮಂದಿ ಸ್ಥಳದಲ್ಲೇ ಸಾವು

ಸಾರಾಂಶ

ರಾಂಪುರದ ಹರ್ಷ ಡಾಬಾ ಬಳಿ ಸಂಚರಿಸುತ್ತಿದ್ದ ಲಾರಿಯ ಟೈರ್ ಸ್ಫೋಟಗೊಂಡು ಅಡ್ಡದಿಡ್ಡಿ ಚಲಿಸಿ ಅದೇ ರಸ್ತೆಯಲ್ಲಿ ಕೂಲಿ ಕಾರ್ಮಿಕರೊಂದಿಗೆ ಸಾಗುತ್ತಿದ್ದ ಟಾಟಾ ಏಸ್, 2 ಆಟೋಗಳಿಗೆ ಡಿಕ್ಕಿ ಹೊಡೆದಿದೆ.

ಚಿತ್ರದುರ್ಗ(ಮಾ.18):  ಜಿಲ್ಲೆಯ ರಾಂಪುರ ಬಳಿ  ಲಾರಿಯೊಂದು ಹಾಗೂ ಟಿಟಿ ಹಾಗೂ 2 ಆಟೋಗಳಿಗೆ ಡಿಕ್ಕಿ ಹೊಡೆದ ಪರಿಣಾಮ 11 ಮಂದಿ ಸ್ಥಳದಲ್ಲೇ ಮೃತಪಟ್ಟು, 7 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ರಾಂಪುರದ ಹರ್ಷ ಡಾಬಾ ಬಳಿ ಸಂಚರಿಸುತ್ತಿದ್ದ ಲಾರಿಯ ಟೈರ್ ಸ್ಫೋಟಗೊಂಡು ಅಡ್ಡದಿಡ್ಡಿ ಚಲಿಸಿ ಅದೇ ರಸ್ತೆಯಲ್ಲಿ ಕೂಲಿ ಕಾರ್ಮಿಕರೊಂದಿಗೆ ಸಾಗುತ್ತಿದ್ದ ಟಾಟಾ ಏಸ್, 2 ಆಟೋಗಳಿಗೆ ಡಿಕ್ಕಿ ಹೊಡೆದಿದೆ. ಟಾಟಾ ಏಸ್'ನಲ್ಲಿದ್ದ 11 ಮಂದಿ ಸ್ಥಳದಲ್ಲೆ  ಸಾವನಪ್ಪಿದ್ದಾರೆ. ಗಾಯಗೊಂಡ 7 ಮಂದಿಯನ್ನು ಚಿತ್ರದುರ್ಗ,ಬಳ್ಳಾರಿ, ದಾವಣಗೆರೆಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ರಾಂಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಹಿಂದೂಗಳಿಗಿಂತ ಮುಸ್ಲಿಮರ ಮೇಲೆ ಹೆಚ್ಚು ಬಾಂಡ್: ಎಸ್‌ಡಿಪಿಐ ಆರೋಪಕ್ಕೆ ಅಂಕಿ-ಅಂಶ ಸಮೇತ ಕಮಿಷನರ್ ತಿರುಗೇಟು!
ಕರೆಂಟ್‌ ಅಕೌಂಟಲ್ಲಿ ₹150 ಕೋಟಿ ಅಲ್ಲ, ₹1 ಸಾವಿರ ಕೋಟಿ ವಹಿವಾಟು