
ಚಿತ್ರದುರ್ಗ (ನ.25): ಕಾರಿನ ಟಯರ್ ಸಿಡಿದು ಐವರು ದುರ್ಮರಣಕ್ಕೀಡಾಗಿರುವ ಭೀಕರ ಘಟನೆ ಹಿರಿಯೂರು ತಾ. ಮೇಟಿಕುರ್ಕೆ ಗ್ರಾಮದ ಬಳಿ ನಡೆದಿದೆ. ಇಬ್ಬರು ಮಕ್ಕಳು ಸೇರಿ ಐವರು ಸಾವನ್ನಪ್ಪಿದ್ದಾರೆ. ನಾಲ್ವರಿಗೆ ಗಂಭೀರ ಗಾಯವಾಗಿದೆ.
ನಾಲ್ವರ ಸ್ಥಿತಿ ಗಂಭೀರವಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹಿರಿಯೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಬೆಂಗಳೂರಿನಿಂದ ಚಿತ್ರದುರ್ಗದ ಕಡೆ ಬರುತ್ತಿದ್ದ ಎರ್ಟಿಗಾ ಕಾರಿನ ಟಯರ್ ಬ್ಲಾಸ್ಟ್ ಆಗಿ ಸ್ಕಾರ್ಪಿಯಾಗೆ ಡಿಕ್ಕಿ ಹೊಡೆದಿದೆ. ಮೃತರು ಚಿತ್ರದುರ್ಗ ಮತ್ತು ಬೆಂಗಳೂರಿನ ಮೂಲದವರು ಎಂದು ತಿಳಿದು ಬಂದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.