
ಕೋಲಾರ (ಜ.13): ಇಂದು ರಾಜ್ಯದ ವಿವಿಧೆಡೆ ಅಪಘಾತ ಸಂಭವಿಸಿದ್ದು, ಸಾವಿನ ಶನಿವಾರವಾಗಿದೆ. ಕೋಲಾರದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ ಸಂಭವಿಸಿದೆ. ಮರಕ್ಕೆ ಆಟೋ ಡಿಕ್ಕಿಯಾಗಿ ಆಟೋದಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಲ್ಲದೇ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಗಾಜಲಬಾವಿ ಸಮೀಪದಲ್ಲಿ ಘಟನೆ ನಡೆದಿದೆ.
ಮೃತರೆಲ್ಲರೂ ಕೂಡ ಬಂಗಾರಪೇಟೆಯ ಸಣ್ಣಕುಪ್ಪಂ ಗ್ರಾಮದವರು ಎನ್ನಲಾಗಿದೆ. ಮೃತರನ್ನು ಭಾಸ್ಕರ್, ಪಾರ್ವತಮ್ಮ, ಗೌರಮ್ಮ ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಮುಳುಬಾಗಿಲು ಹಾಗೂ ಕೋಲಾರ ಸ್ಪತ್ರೆಗೆ ದಾಖಲು ಮಾಡಲಾಗಿದೆ. ಇವರೆಲ್ಲರೂ ಕೂಡ ಕುಟುಂಬ ಸಮೇತರಾಗಿ ಖಾದ್ರಿಪುರ ಶನಿದೇವಾಲಯಕ್ಕೆ ಹೋಗಿ ಬರುವಾಗ ಈ ಭೀಕರ ಅಪಘಾತ ಸಂಭವಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.