ಬೆಳಗಾವಿ: ಮೂತ್ರ ವಿಸರ್ಜನೆಗೆ ತೆರಳಿದ್ದ ಮಕ್ಕಳ ಪೀಡಕ ಎಸ್ಕೇಪ್

Published : Apr 17, 2019, 11:57 PM IST
ಬೆಳಗಾವಿ: ಮೂತ್ರ ವಿಸರ್ಜನೆಗೆ ತೆರಳಿದ್ದ ಮಕ್ಕಳ ಪೀಡಕ ಎಸ್ಕೇಪ್

ಸಾರಾಂಶ

ಪೋಕ್ಸೊ ಕಾಯ್ದೆ ಅಡಿಯಲ್ಲಿ ಬಂಧಿತನಾಗಿದ್ದ ಆರೋಪಿ ಪೊಲೀಸರ ಕಣ್ಣು ತಪ್ಪಿಸಿ ಪರಾರಿಯಾಗಿದ್ದಾನೆ. ವೈದಕೀಯ ಪರೀಕ್ಷೆಗೆ ಕರೆದಂತ ವೇಳೆ ಪೊಲೀಸರಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದಾನೆ.

ಬೆಳಗಾವಿ[ಏ. 17] ಪೋಕ್ಸೊ ಕಾಯ್ದೆ ಅಡಿಯಲ್ಲಿ ಬಂಧಿತನಾಗಿದ್ದ ಆರೋಪಿಯನ್ನು ವೈದಕೀಯ ಪರೀಕ್ಷೆಗೆ ಕರೆದಂತ ವೇಳೆ ಪೊಲೀಸರಿಂದ ತಪ್ಪಿಸಿಕೊಂಡು ಪರಾರಿಯಾದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಇಲ್ಲಿನ ರುಕ್ಮಿಣಿ ನಗರದ ಚಂದ್ರು ಮೋಹನ ಹರಿಜನ (26) ಪರಾರಿಯಾದ ಆರೋಪಿ.  ಪೋಕ್ಸೋ ಕಾಯ್ದೆ ಅಡಿಯಲ್ಲಿ ಮಂಗಳವಾರ ಮಾಳಮಾರುತಿ ಠಾಣೆಯ ಪೊಲೀಸರು ಬಂಧಿಸಿದ್ದರು. ನಂತರ ಆರೋಪಿಯನ್ನು ವೈದ್ಯಕೀಯ ಪರೀಕ್ಷೆಗೆಗಾಗಿ ಜಿಲ್ಲಾಸ್ಪತ್ರೆಗೆ ಕರೆ ತಂದಿದ್ದರು, ಈ ವೇಳೆ ಮೂತ್ರ ವಿಸರ್ಜನೆ ಹೋಗಿ ಬರುವುದಾಗಿ ಕರೆತಂದ ಪೊಲೀಸರಿಗೆ ತಿಳಿಸಿದ್ದಾನೆ. 

ಶ್ವಾನದೊಂದಿಗೆ ಪತ್ನಿಯನ್ನು ಸೆಕ್ಸ್ ಗೆ ದೂಡಿದ್ದ ಬೆಳಗಾವಿ ಪತಿಗೆ ಶಿಕ್ಷೆ

ಮೂತ್ರ ವಿಸರ್ಜನೆಗಾಗಿ ಶೌಚಾಲಯಕ್ಕೆ ಹೋಗಿದ್ದಾನೆ. ಇದನ್ನು ನೋಡಿದ ಪೊಲೀಸರು ಆರೋಪಿ ಮಾತಿನ ಮೇಲೆ ಭರವಸೆ ವ್ಯಕ್ತವಾಗಿದ್ದರಿಂದ ಮರಳಿ ಬರುವ ನೀರಿಕ್ಷೆ ಹೊಂದಿದ್ದರು. ಕೆಲ ಸಮಯ ಕಳೆದರೂ ಆರೋಪಿ ಶೌಚಾಲಯದ ಕೊಠಡಿಯಿಂದ ಬಾರದೇ ಇರುವುದರಿಂದ ಅನುಮಾನಗೊಂಡು ಹೋಗಿ ನೋಡಿದ್ದಾರೆ.

ಅಷ್ಟರಲ್ಲಿ ಆರೋಪಿ ಚಂದ್ರ ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿ ಪರಾರಿಯಾಗಿದ್ದಾನೆ. ಈ ಕುರಿತು ಮಾಳಮಾರುತಿ ಠಾಣೆಯ ಪೊಲೀಸರು, ನಗರದ ಎಪಿಎಂಸಿ‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮದುವೆ ಮಾತುಕತೆಗೆಂದು ಕರೆಸಿ ಎಂಜಿನಿಯರಿಂಗ್ ವಿದ್ಯಾರ್ಥಿಯ ಮಸಣಕ್ಕೆ ಅಟ್ಟಿದ ಗರ್ಲ್‌ಫ್ರೆಂಡ್ ಮನೆಯವರು
ಕೆನಡಾದ ಮಹಿಳಾ ವೈದ್ಯರಿಗೆ ತೋರಿಸಬಾರದನ್ನು ತೋರಿಸಿದ ಭಾರತೀಯ ಯುವಕನ ಬಂಧನ