ಕಲ್ಲಡ್ಕ: ಆರೋಪಿ ಹಿಂದೂ ಜಾಗರಣಾ ವೇದಿಕೆಯ ನಾಯಕ ಆಸ್ಪತ್ರೆಯಿಂದಲೇ ಪರಾರಿ

Published : Jun 15, 2017, 11:04 AM ISTUpdated : Apr 11, 2018, 01:05 PM IST
ಕಲ್ಲಡ್ಕ: ಆರೋಪಿ ಹಿಂದೂ ಜಾಗರಣಾ ವೇದಿಕೆಯ ನಾಯಕ ಆಸ್ಪತ್ರೆಯಿಂದಲೇ ಪರಾರಿ

ಸಾರಾಂಶ

ದಕ್ಷಿಣ ಕನ್ನಡ ಜಿಲ್ಲೆಯ ಕಲ್ಲಡ್ಕದ  ಘರ್ಷಣೆಯಲ್ಲಿ ಗಾಯಗೊಂಡು ಆಸ್ಪತ್ರೆ ಸೇರಿದ್ದ ಆರೋಪಿ ರತ್ನಾಕರ ಶೆಟ್ಟಿ ಆಸ್ಪತ್ರೆಯಿಂದ ಪರಾರಿಯಾಗಿದ್ದಾನೆ.

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಲ್ಲಡ್ಕದ  ಘರ್ಷಣೆಯಲ್ಲಿ ಗಾಯಗೊಂಡು ಆಸ್ಪತ್ರೆ ಸೇರಿದ್ದ ಆರೋಪಿ ರತ್ನಾಕರ ಶೆಟ್ಟಿ ಆಸ್ಪತ್ರೆಯಿಂದ ಪರಾರಿಯಾಗಿದ್ದಾನೆ.

ಪುತ್ತೂರು ಹಿಂದೂ ಜಾಗರಣಾ ವೇದಿಕೆಯ ಅಧ್ಯಕ್ಷನಾಗಿರುವ ರತ್ನಾಕರ ಶೆಟ್ಟಿ  ಕಲ್ಲಡ್ಕದಲ್ಲಿ ನಡೆದ ಘರ್ಷಣೆ ವೇಳೆ ಖಲೀಲ್ ಎಂಬಾತನಿಗೆ ಹಲ್ಲೆ ನಡೆಸಿದ ಆರೋಪವಿತ್ತು .ಈ  ಸಂಬಂಧ ರತ್ನಾಕರ್ ಶೆಟ್ಟಿ ಮೇಲೆ  ಪ್ರಕರಣ ದಾಖಲಾಗಿತ್ತು.  

ಘರ್ಷಣೆಯಲ್ಲಿ ಗಾಯಗೊಂಡಿದ್ದ ಕಾರಣ ಈತನಿಗೆ  ಪೊಲೀಸ್ ಕಾವಲಿನಲ್ಲಿ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು .

ತಡರಾತ್ರಿ ಪೋಲೀಸರು ನಿದ್ದೆಗೆ ಜಾರಿದ್ದ ವೇಳೆ  ಆರೋಪಿ ಪರಾರಿಯಾಗಿದ್ದಾನೆ. ಪುತ್ತೂರು ಮತ್ತು ಬಂಟ್ವಾಳ ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸಿದ್ದಾರೆ.

ಮೂವರು ಪೊಲೀ ಅಮಾನತು:

ಈ ಸಂಬಂಧ ಕರ್ತವ್ಯ ಲೋಪದ ಆರೋಪದಡಿ  ಪುತ್ತೂರು ನಗರ ಠಾಣೆ  ಪಿಎಸ್ಸೈ ಓಮನಾ, ಹೆಡ್ ಕಾನ್ಸ್‌ಟೇಬಲ್ ರಾಧಕೃಷ್ಣ ಹಾಗೂ ಪೇದೆ ರಮೇಶ್ ಲಮಾಣಿ ಅಮಾನತಾಗಿದ್ದಾರೆ.  ದಕ್ಷಿಣ ಕನ್ನಡ  ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೂಷಣ್ ಗುಲಾಬ್ ರಾವ್ ಬೊರಸೆ ಮೂವರನ್ನು ಅಮಾನತು ಮಾಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮದುವೆ ಮಾತುಕತೆಗೆಂದು ಕರೆಸಿ ಎಂಜಿನಿಯರಿಂಗ್ ವಿದ್ಯಾರ್ಥಿಯ ಮಸಣಕ್ಕೆ ಅಟ್ಟಿದ ಗರ್ಲ್‌ಫ್ರೆಂಡ್ ಮನೆಯವರು
ಕೆನಡಾದ ಮಹಿಳಾ ವೈದ್ಯರಿಗೆ ತೋರಿಸಬಾರದನ್ನು ತೋರಿಸಿದ ಭಾರತೀಯ ಯುವಕನ ಬಂಧನ