ಉಗ್ರರಿಗೆ ಬಿಸಿ ಮುಟ್ಟಿಸಿ: ಸೇನೆಗೆ ಷರೀಫ್ ಸೂಚನೆ

Published : Oct 06, 2016, 11:00 AM ISTUpdated : Apr 11, 2018, 01:00 PM IST
ಉಗ್ರರಿಗೆ ಬಿಸಿ ಮುಟ್ಟಿಸಿ: ಸೇನೆಗೆ ಷರೀಫ್ ಸೂಚನೆ

ಸಾರಾಂಶ

ಇಸ್ಲಾಮಾಬಾದ್(ಅ.06): ಭಯೋತ್ಪಾದನೆಯನ್ನು ಮಟ್ಟಹಾಕಿ ಎಂದು ಪಾಕಿಸ್ತಾನದ ಮೇಲೆ ಜಾಗತಿಕವಾಗಿ ಒತ್ತಡ ಕೇಳಿಬಂದ ಹಿನ್ನೆಲೆಯಲ್ಲಿ ಪ್ರಧಾನಿ ನವಾಜ್ ಷರೀಫ್ ಸೇನೆಗೆ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ ಎಂದು ಡಾನ್ ಪತ್ರಿಕೆ ವರದಿ ಮಾಡಿದೆ.

ಪಾಕಿಸ್ತಾನ ಸರ್ಕಾರವು ಉನ್ನತಾಧಿಕಾರಿಗಳೊಂದಿಗೆ ಗೌಪ್ಯ ಸಭೆ ನಡೆಸಿದ್ದು, ದೇಶಕ್ಕೆ ಕಪ್ಪುಚುಕ್ಕೆಯಾಗಿರುವ ಭಯೋತ್ಪಾದನೆಯನ್ನು ಮಟ್ಟಹಾಕಿ, ಇಲ್ಲದಿದ್ದರೆ ನಾವು ಜಾಗತಿಕವಾಗಿ ಮುಖಭಂಗ ಎದುರಿಸಬೇಕಾಗುತ್ತದೆ ಎಂದು ಸೇನೆಗೆ ಸೂಚಿಸಲಾಗಿದೆ ಎಂದು ಪಾಕಿಸ್ತಾನದ 'ಡಾನ್' ಪತ್ರಿಕೆ ವರದಿ ಮಾಡಿದೆ.

ಭಾರತದ ಮೇಲೆ 2008ರ ಮುಂಬೈ ದಾಳಿ, ಉರಿ ದಾಳಿಯ ನಂತರ ವ್ಯಾಪಕವಾಗಿ ಪಾಕ್ ಮೇಲೆ ಜಾಗತಿಕವಾಗಿ ಒತ್ತಡವೇರ್ಪಟ್ಟಿದೆ. ಭಯೋತ್ಪಾದನೆಯನ್ನು ಮಟ್ಟಹಾಕದಿದ್ದರೆ ವಿಶ್ವಸಮುದಾಯದಿಂದ ನಾವು ಬಹಿಷ್ಕರಿಸಲ್ಪಡಬೇಕಾಗುತ್ತದೆ ಎಂಬ ಎಚ್ಚರಿಕೆಯನ್ನು ಪಾಕಿಸ್ತಾನದ ವಿದೇಶಾಂಗ ಕಾರ್ಯದರ್ಶಿ ಸರ್ತಾಜ್ ಏಜಾಜ್ ಚೌದರಿ ಎಚ್ಚರಿಕೆ ನೀಡಿದ್ದಾರೆ ಎಂದು ಪತ್ರಿಕೆ ವರದಿ ಮಾಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಪಿಎಫ್ ಹಣ ಹಿಂಪಡೆಯುವ ನೀತಿಯಲ್ಲಿ 11 ಬದಲಾವಣೆ, EPFO 3.0 ನಿಯಮ ಜಾರಿ
ಕ್ರಿಸ್ಮಸ್ ಹಬ್ಬಕ್ಕೆ ಭಾರತದ ಹಲವು ನಗರದಲ್ಲಿ ಡ್ರೈ ಡೇ; ಮದ್ಯದಂಗಡಿ, ಬಾರ್ ತೆರೆದಿರುತ್ತಾ?