ಸರ್ಕಾರಿ ವೈದ್ಯರ ಚೀಟಿ ಪದ್ಧತಿ ವಿರುದ್ಧ ಕ್ರಮ: ಸಚಿವ ರಮೇಶ್ ಕುಮಾರ್

Published : Oct 01, 2016, 05:10 AM ISTUpdated : Apr 11, 2018, 01:01 PM IST
ಸರ್ಕಾರಿ ವೈದ್ಯರ ಚೀಟಿ ಪದ್ಧತಿ ವಿರುದ್ಧ ಕ್ರಮ: ಸಚಿವ ರಮೇಶ್ ಕುಮಾರ್

ಸಾರಾಂಶ

ಬೆಂಗಳೂರು (ಅ.01): ‘‘ಸರ್ಕಾರಿ ಆಸ್ಪತ್ರೆಗಳ ವೈದ್ಯರು ರೋಗಿಗಳು ಖಾಸಗಿ ಔಷಧಾಲಯಗಳಲ್ಲಿ ಔಷಧಿಗಳನ್ನು ಖರೀದಿ​ಸುವಂತೆ ಚೀಟಿ ಬರೆದುಕೊಡುವ ಪದ್ಧತಿ​ ನಿಷೇಧಿಸಲು ಕಠಿಣ ಕ್ರಮ ಕೈಗೊಳ್ಳಲಾಗು​ವುದು,'' ಎಂದು ಆರೋಗ್ಯ ಸಚಿವ ಕೆ.ಆರ್‌.ರಮೇಶ್‌ ಕುಮಾರ್‌ ತಿಳಿಸಿದ್ದಾರೆ.

‘ಭೂಮಿಕ' ಸಂಸ್ಥೆ ಗಾಂಧಿ ಭವನದಲ್ಲಿ ಶುಕ್ರ​ವಾರ ಹಮ್ಮಿಕೊಂಡಿದ್ದ ಸಂವಾದದಲ್ಲಿ ಮಾತನಾಡಿದ ಅವರು, ‘‘ಸರ್ಕಾರಿ ಆಸ್ಪತ್ರೆಗಳಲ್ಲಿ ಅವ್ಯವಸ್ಥೆ ತಾಂಡವ​ವಾಡು ತ್ತಿದೆ. ವೈದ್ಯರು ಸರ್ಕಾರದಿಂದ ನೀಡುವ ಔಷಧಿಗಳನ್ನು ರೋಗಿಗಳಿಗೆ ವಿತರಿಸುತ್ತಿಲ್ಲ. ಹೊರಗಿನವರಿಗೆ ಅನುಕೂ ಲ ಮಾಡಿಕೊಡಲು ಚೀಟಿ ಬರೆದುಕೊಡುತ್ತಿದ್ದಾರೆ. ಹೀಗಾಗಿ ಸರ್ಕಾರ ಖರೀದಿಸಿದ ಔಷಧಿಗಳು ದಿನಾಂಕ ಮುಗಿದು ತಿಪ್ಪೆಗೆ ಸೇರುತ್ತಿವೆ. ಆದ್ದರಿಂದ ಸರ್ಕಾರಿ ವೈದ್ಯರು ಚೀಟಿ ಬರೆದುಕೊಡುವುದನ್ನು ನಿಷೇಧಿಸಲು ಸರ್ಕಾರ ಗಂಭೀರ ಚಿಂತನೆ ನಡೆಸಿದೆ,'' ಎಂದರು. 

‘‘ಟಿ.ಎನ್‌.ಸೀತಾರಾಂ ನಿರ್ದೇಶನದ ಮನ್ವಂ​ತರ ಧಾರವಾಹಿಯಲ್ಲಿ ನಾನು ಮುಖ್ಯಮಂತ್ರಿಯ ಪಾತ್ರ ವಹಿಸಿದ್ದೆ. ಆಗ ಆಸ್ಪತ್ರೆಗಳಿಗೆ ದಿಢೀರ್‌ ಭೇಟಿ ನೀಡಿ ಅಲ್ಲಿನ ಭ್ರಷ್ಟವೈದ್ಯರನ್ನು ಅಮಾನತು ಮಾಡುತ್ತಿದೆ. ಈಗ ನಿಜವಾಗಿ ಆರೋಗ್ಯ ಸಚಿವ​ನಾಗಿದ್ದೇನೆ. ಧಾರಾ ವಾಹಿ ಮಾದರಿಯಲ್ಲಿಯೇ ಆಸ್ಪತ್ರೆ​ಗಳಿಗೆ ದಿಢೀರ್‌ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದೇನೆ. ಮನ್ವಂತರ ಧಾರವಾಹಿಯಲ್ಲಿನ ನನ್ನ ಪಾತ್ರ ಮರಳಿ ನನಗೆ ರಾಜಕೀಯ ನೆಲೆ ನೀಡಿತು,'' ಎಂದು ಸ್ಮರಿಸಿದರು.

ಶಾಸಕ ವೈ.ಎಸ್‌.ವಿ.ದತ್ತ ಮಾತನಾಡಿ, ‘‘ಶಾಸ​ಕರು ವಿಧೇಯಕಗಳನ್ನು ಮಾಡುವುದನ್ನು ಬಿಟ್ಟು ಬೇರೆಲ್ಲವನ್ನೂ ಮಾಡುತ್ತಿದ್ದಾರೆ. ಇಂದು ವಿಧಾನ​ಸಭೆಯಲ್ಲಿ ವಿಧೇಯಕಗಳ ಮೇಲೆ ಚರ್ಚೆ, ರಚ​ನಾತ್ಮಕ ಟೀಕೆಗಳು ನಡೆಯುತ್ತಿಲ್ಲ. ಹೀಗಾಗಿ ವಿಧಾನ​ಸಭೆ ತನ್ನ ಅರ್ಥ ಕಳೆದುಕೊಂಡಿದೆ. ಶಾಸಕರ ಚರ್ಚೆ ಇಲ್ಲದೆ ಮಂಡನೆಯಾಗುತ್ತುವ ಕಾನೂನುಗಳಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿವೆ. ಇನ್ನು ಕೆಲ ಕಾನೂನುಗಳು ಭಷ್ಟರಿಗೆ ಅಸ್ತ್ರವಾಗಿ ಪರಿಣ​ಮಿಸಿವೆ,'' ಎಂದು ಬೇಸರ ವ್ಯಕ್ತಪಡಿಸಿದರು. 

‘ಏಷ್ಯಾ ನೆಟ್‌ ನ್ಯೂಸ್‌ ನೆಟ್‌ವರ್ಕ್ ಲಿಮಿಟೆಡ್‌'ನ ಸಂಪಾದಕೀಯ ನಿರ್ದೇಶಕರಾದ ಸುಗತ ಶ್ರೀನಿವಾಸರಾಜು ಮಾತನಾಡಿ, ‘ನಾನು ಎಲ್ಲರೊಂ​ದಿಗೆ ಬೆರೆಯುವುದಿಲ್ಲ ಎಂಬ ಆರೋಪಗಳಿವೆ. ಆದರೆ, ರಾಜಕಾರಣಿಗಳ ಬಗ್ಗೆ ಎಷ್ಟುಹಗುರವಾಗಿ ಮಾತ​ನಾಡುತ್ತಾರೋ, ಪತ್ರಿಕಾ ಸಂಪಾದಕರ ಬಗೆಗೂ ಅಷ್ಟೇ ಹಗುರವಾಗಿ ಮಾತನಾಡುವ ಪ್ರ​ವೃ​ತ್ತಿ ಬೆಳೆಯುತ್ತಿದೆ. ಹೀಗಾಗಿ ಕೆಲವೊಮ್ಮೆ ಅಂತರ ಕಾಯ್ದುಕೊಳ್ಳುವುದು ಆರೋಗ್ಯಕರ ಹಾಗೂ ವೃತ್ತಿ ಬದ್ಧತೆಗೆ ಪೂರಕ,'' ಎಂದು ತಿಳಿಸಿದರು. 

‘‘ಬಹಳ ಅದ್ಬುತವಾಗಿ ಭಾಷಣ ಮಾಡಿ, ನಾಳೆಯೇ ಎಲ್ಲವೂ ಆಗಿ ಹೋಯಿತು, ನಾಳೆಯಿಂದ ಸ್ವರ್ಗದ ಬಾಗಿಲು ತೆರೆದೇ ಬಿಟ್ಟಿತು ಎಂದು ಮಾತನಾಡಿ 2014ರಿಂದ ಈವರೆಗೆ ಏನಾಗಿದೆ ಎಂ​ಬುದು ನಮಗೆಲ್ಲ ತಿಳಿದಿದೆ. ಅದ್ಭುತವಾಗಿ ಮಾತನಾ​ಡುವವರ ಒಂದು ವಲಯವಿದೆಯಾದರೂ, ಮಾತು​ಗಾರಿಕೆ ಜತೆಗೆ ಬದ್ಧತೆ ಇರುವುದು ಬಹಳ ಮುಖ್ಯವಾಗುತ್ತದೆ. ಅಂತಹ ಮಾತುಗಾರಿಕೆ ಮತ್ತು ಬದ್ಧತೆ ರಮೇಶ್‌ ಕುಮಾರ್‌ ಮತ್ತು ವೇದಿಕೆ​ಯಲ್ಲಿರುವ ಇತರರಲ್ಲೂ ಇದೆ,'' ಎಂದರು. 

‘‘ತರ್ಕದ ಮೂಲಕ ಮಾತನಾಡುವವರಿಗೆ ಅಂತಃ​​ಕರಣ ಇರುವುದಿಲ್ಲ. ರಮೇಶ್‌ ಕುಮಾರ್‌ ಬದ್ಧತೆಯಿರುವ ರಾಜಕಾರಣಿ. ಅವರೊಂದಿಗೆ ಹೆಚ್ಚು ಒಡನಾಟವಿಲ್ಲದಿದ್ದರೂ ಅವರ ಬಗ್ಗೆ ಹಾಗೂ ಅವರ ರಾಜಕಾರಣದ ಶೈಲಿ ನನಗೆ ಇಷ್ಟ. ವರ್ತಮಾನದ ರಾಜಕಾರಣದಲ್ಲಿ ಉತ್ತಮ ಸಂಸ​ದೀಯ ಪಟುಗಳ ಪೈಕಿ ಶ್ರೇಷ್ಠರು, ಆಡಳಿತಾರೂಢ ಪಕ್ಷದಲ್ಲೇ ಇದ್ದು, ಅದೇ ಸರ್ಕಾರದ ಲೋಪಗಳನ್ನು ಟೀಕಿಸುವ ಛಾತಿ ರಮೇಶ್‌ ಕುಮಾರ್‌ ಹೊಂದಿದ್ದಾರೆ,'' ಎಂದರು. 

‘‘ಇಂದಿರಾಗಾಂಧಿ ಅವರಿಗೆ ಸಂವಿಧಾನಾತ್ಮಕ ಕಾನೂನು ಸರಿಯಾಗಿ ಅರ್ಥವಾಗುತ್ತಿರಲಿಲ್ಲ. Ö​ಾಗಾಗಿ ತುರ್ತು ಪರಿಸ್ಥಿತಿ ಘೋಷಣೆ ಮಾಡಿದರು ಎಂಬುದಾಗಿ ನನ್ನ ಗುರುಗಳಾದ ಶಾರದಾ ಪ್ರಸಾದ್‌ ಅವರು ಸದಾ ಹೇಳುತ್ತಿದ್ದರು. ಹಾಗಾದರೆ, ಸಂವಿಧಾನಾತ್ಮಕ ಕಾನೂನನ್ನು ಸರಿಯಾಗಿ ಅರ್ಥ ಮಾಡಿಕೊಂಡಿರುವವರು ಯಾರು ಎಂದು ಅವರನ್ನು ಪ್ರಶ್ನಿಸಿದ್ದೆ. ಆಗ ಅವರು ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಅವರು ಸಂವಿಧಾನಾತ್ಮಕ ಕಾನೂನನ್ನು ಅರ್ಥ ಮಾಡಿಕೊಂಡಷ್ಟುಮತ್ಯಾರು ಅರ್ಥ ಮಾಡಿಕೊಂಡಿಲ್ಲ ಎಂದು ತಿಳಿಸಿದ್ದರು. ಅಂಥ ನಾಯಕರ ಗರಡಿಯಲ್ಲಿ ಸಾಕಷ್ಟುನಾಯಕರು ಬೆಳೆದಿದ್ದಾರೆ. ಎರಡನೇ ಹಂತದ ನಾಯಕತ್ವ ಕರ್ನಾಟಕ­ದಲ್ಲಿ ಬೆಳೆದಿದೆ ಎಂದರೆ ಅದಕ್ಕೆ ರಾಮಕೃಷ್ಣ ಹೆಗ್ಡೆ ಹಾಗೂ ದೇವೇಗೌಡ ಅವರೇ ಕಾರಣ,'' ಎಂದರು. 

ಕರ್ನಾಟಕ ಚಿತ್ರಕಲಾ ಪರಿಷತ್‌ ಅಧ್ಯಕ್ಷ ಬಿ.ಎಲ್‌.ಶಂಕರ್‌ ಮಾತನಾಡಿ, ‘‘ಕಾವೇರಿ ವಿಚಾರದಲ್ಲಿ ಮೂರು ದಿನಗಳಿಗೊಮ್ಮೆ ವಿಚಾರಣೆ ಮಾಡುವಷ್ಟುಬಿಡುವು ಸುಪ್ರೀಂ ಕೋರ್ಟ್‌ಗಿದೆ ಎಂಬುದನ್ನು ನೋಡಿ ನನಗೆ ಆಶ್ಚರ್ಯವಾಗುತ್ತಿದೆ. ಮೇಲೆ ಕೂತು ಹಳ್ಳಿಗೌಡರ ರೀತಿಯಲ್ಲಿ ಎದುರಿಸುವುದು ನಡೆಯುತ್ತಿದೆ. ಇತ್ತೀಚೆಗೆ ತೀರ್ಪು ನೀಡುವ ವೇಳೆ ನ್ಯಾಯಮೂರ್ತಿಗಳು ‘ನೋ ಬಡಿ ಈಸ್‌ ಎಬೋ ದಿ ಲಾ' ಎಂದಿದ್ದಾರೆ. ಅವರು ಸಹ ‘ಎಬೋ ದಿ ಲಾ' ಮೀರಿದವರಲ್ಲ ಎಂಬುದನ್ನು ಅವರು ಅರಿಯಬೇಕಿದೆ,'' ಎಂದರು.
ಕವಿ ಡಾ.ಸಿದ್ದಲಿಂಗಯ್ಯ, ನಿರ್ದೇಶಕ ಟಿ.ಎನ್‌.ಸೀತಾರಾಂ, ಮುಖ್ಯಮಂತ್ರಿ ಚಂದ್ರು, ರಂಗಕರ್ಮಿ ದತ್ತಣ್ಣ, ಎಸ್‌.ಎನ್‌.ಶ್ರೀಧರ್‌, ಸುಂದರ್‌ರಾಜ್‌ ಸೇರಿದಂತೆ ಪ್ರಮುಖರು ಹಾಜರಿದ್ದರು.

-ಕನ್ನಡಪ್ರಭ ವರದಿ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ತಾಯಿಯ ಜಾತಿ ಆಧಾರದಲ್ಲೇ ಮಗಳಿಗೆ ಜಾತಿ ಪ್ರಮಾಣಪತ್ರ: ಸುಪ್ರೀಂ ಮಹತ್ವದ ತೀರ್ಪು
ನೆತನ್ಯಾಹು ಪ್ರಧಾನಿ ಮೋದಿಗೆ ಕರೆ ಮಾಡಿ ಮಾತುಕತೆ: ಭಯೋತ್ಪಾದನೆ ವಿರುದ್ಧ ದೊಡ್ಡ ನಿರ್ಧಾರ!