
ಬೆಂಗಳೂರು, [ಅ.29] ನಟ ದುನಿಯಾ ವಿಜಯ್ ಹಾಗೂ ಮೊದಲ ಪತ್ನಿ ನಾಗರತ್ನ ನಡುವಿನ ಸಂಸಾರ ಕಲಹ ಮುಂದುವರೆದಿದೆ.
ನಟ ದುನಿಯಾ ವಿಜಯ್ ಕುಟುಂಬದ ರಂಪಾಟ ಬೀದಿಗೆ ಬಿದ್ದಿದೆ. ಇಬ್ಬರ ಹೆಂಡರ ಜಗಳ ದನಿಯಾ ವಿಜಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಇದ್ರಿಂದ ಬೇಸತ್ತಿರುವ ದುನಿಯಾ ವಿಜಯ್ ಮೊದಲ ಪತ್ನಿ ನಾಗರತ್ನ ಅವರಿಂದ ವಿವಾಹ ವಿಚ್ಚೇದನಕ್ಕೆ ಮುಂದಾಗಿದ್ದಾರೆ.
ದುನಿಯಾ ವಿಜಯ್ ಅವರು ತಮ್ಮ ಮೊದಲ ಪತ್ನಿ ನಾಗರತ್ನರಿಂದ ವಿಚ್ಚೇದನ ಕೋರಿ ಇಂದು [ಸೋಮವಾರ] ಅರ್ಜಿ ಸಲ್ಲಿಸಿದ್ದಾರೆ. ವಕೀಲೆ ರಾಜರಾಜೇಶ್ವರಿ ಅವರ ಮೂಲಕ ದುನಿಯಾ ವಿಜಯ್ ವಿಚ್ಚೇದನಕ್ಕೆ ಫ್ಯಾಮಿಲಿ ಕೋರ್ಟ್ಗೆ ಅರ್ಜಿ ಹಾಕಿದ್ದಾರೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.