
ಮುಂಬೈ : ಪ್ರಸಿದ್ಧ ಸೀರಿಯಲ್ ನಟಿ ರೂಪಾಲಿ ಗಂಗೂಲಿ ಅವರ ಕಾರು ಅಪಘಾತಕ್ಕೆ ಈಡಾದ ಘಟನೆ ಸೋಮವಾರ ನಡೆದಿದೆ. ರೂಪಾಲಿ ತೆರಳುತ್ತಿದ್ದ ಕಾರಿಗೆ ಇಬ್ಬರು ಬೈಕ್ ನಲ್ಲಿ ಬಂದ ಯುವಕರು ಉದ್ದೇಶಪೂರ್ವಕವಾಗಿ ಡಿಕ್ಕಿ ಮಾಡಿದ್ದಾರೆ.
ಅಲ್ಲದೇ ಇದನ್ನು ಪ್ರಶ್ನೆ ಮಾಡಿದ್ದಕ್ಕೆ ಅವರು ತಮ್ಮ 5 ವರ್ಷದ ಪುತ್ರನ ಮುಂದೆಯೇ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಹೇಳಿದ್ದಾರೆ. ಅಕಾಸ್ಮಾತ್ ಆಗಿ ತಾವು ತೆರಳುತ್ತಿದ್ದ ಕಾರು ಬೈಕ್ ಗೆ ಸ್ವಲ್ಪ ತಾಗಿದ್ದು ಇದರಿಂದ ರೊಚ್ಚಿಗೆದ್ದ ಬೈಕ್ ಸವಾರರು ತಮ್ಮ ಕಾರಿನ ಗಾಜಿಗೆ ಗುದ್ದಿ ಒಡೆದಿದ್ದಾಗಿ ಹೇಳಿದ್ದಾರೆ.
ತಾವು ಈ ಬಗ್ಗೆ ಕ್ಷಮೆ ಯಾಚಿಸಿದರೂ ಕೂಡ ಈ ಅಮಾನವೀಯವಾಗಿ ನಡೆದುಕೊಂಡಿದ್ದಾರೆ. ಕಾರಿನ ಗಾಜು ಸಂಪೂರ್ಣವಾಗಿ ಒಡೆದಿದ್ದು, ಈ ವೇಳೆ ತಾವು ಗಾಯಗೊಂಡಿದ್ದಾಗಿ ರೂಪಾಲಿ ಹೇಳಿದ್ದಾರೆ.
ಇನ್ನು ಈ ಸಂಬಂಧ ತಕ್ಷಣವೇ ಅವರು ವರ್ಸೋವಾ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲು ಮಾಡಿದ್ದಾಗಿ ಹೇಳಿದ್ದಾರೆ. ಅಲ್ಲದೇ ತಕ್ಷಣವೇ ಪೊಲೀಸರು ಆರೋಪಿಗಳನ್ನು ಪತ್ತೆ ಮಾಡಿ ವಶಕ್ಕೆ ಪಡೆದಿದ್ದು ಈ ನಿಟ್ಟಿನಲ್ಲಿ ಮುಂಬೈ ಪೊಲೀಸರಿಗೆ ಧನ್ಯವಾದ ಎಂದು ಹೇಳಿಕೊಂಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.