ದರ್ಶನ್ ಡಿಸ್ಚಾರ್ಜ್ ಯಾವಾಗ? ಸೃಜನ್ ಲೋಕೇಶ್ ಏನಂದ್ರು?

Published : Sep 24, 2018, 08:48 PM IST
ದರ್ಶನ್ ಡಿಸ್ಚಾರ್ಜ್ ಯಾವಾಗ? ಸೃಜನ್ ಲೋಕೇಶ್ ಏನಂದ್ರು?

ಸಾರಾಂಶ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಕಾರು ಅಪಘಾತದಲ್ಲಿ ಗಾಯಗೊಂಡು ಮೈಸೂರಿನ ಕೋಲಂಬಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದರ್ಶನ್ ಈಗ ಹೇಗಿದ್ದಾರೆ? ಆಸ್ಪತ್ರೆಯಿಂದ ದರ್ಶನ್ ಡಿಸ್ಚಾರ್ಜ್ ಯಾವಾಗ? ಎನ್ನುವುದನ್ನು ದರ್ಶನ್ ಅವರ ಕುಚುಕು ಸೃಜನ್ ಲೋಕೇಶ್ ಮಾಹಿತಿ ನೀಡಿದ್ದಾರೆ. 

ಮೈಸೂರು, (ಸೆ.24): ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಕಾರ್ ಅಪಘಾತದಲ್ಲಿ ಗಾಯಗೊಂಡು ಮೈಸೂರಿನ ಕೋಲಂಬಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದರ್ಶನ್ ಈಗ ಹೇಗಿದ್ದಾರೆ? ಆಸ್ಪತ್ರೆಯಿಂದ ದರ್ಶನ್ ಡಿಸ್ಚಾರ್ಜ್ ಯಾವಾಗ? ಎನ್ನುವುದನ್ನು ದರ್ಶನ್ ಅವರ ಕುಚುಕು  ಗೆಳೆಯ ಸೃಜನ್ ಲೋಕೇಶ್ ಮಾಹಿತಿ ನೀಡಿದ್ದಾರೆ. 

ಸೃಜನ್ ಲೋಕೇಶ್ ಕೋಲಂಬಿಯಾ ಆಸ್ಪತ್ರೆಗೆ ದೌಡಾಯಿಸಿ, ಗಾಯಗೊಂಡಿರುವ ಸ್ನೇಹಿತನ ಆರೋಗ್ಯ ವಿಚಾರಿಸಿದರು. ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸೃಜನ್, ಆ್ಯಕ್ಸಿಡೆಂಟ್ ನಮಗೆ ಗೊತ್ತಿಲ್ಲದೆ ಆಗೋದು. ದೇವರ ದಯದಿಂದ ಯಾರಿಗೂ ಏನು ಆಗಿಲ್ಲ ಎಂದರು.

ದರ್ಶನ್ ಅಪಘಾತದ ಎಲ್ಲಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

 ಅಭಿಮಾನಿಗಳು ಆತಂಕ ಪಡುವ ಅವಶ್ಯಕತೆ ಇಲ್ಲ. ಯಾರಾದ್ರು ರೂಮರ್ಸ್ ಹಬ್ಬಿಸಿದ್ರೆ ನಂಬಬೇಡಿ. ಈಗಾಗಲೇ ಎಲ್ಲ ಸರ್ಜರಿ ಮುಗಿದಿದ್ದು, ನಾಳೆ [ಮಂಗಳವಾರ] ರಾತ್ರಿ ಅಥವಾ ನಾಡಿದ್ದು [ಬುಧವಾರ] ಬೆಳಗ್ಗೆ ಡಿಸ್ಚಾರ್ಜ್ ಆಗುತ್ತಾರೆ.  ಇನ್ನು ಪ್ರಜ್ವಲ್ ಮತ್ತು ದೇವರಾಜು ನಾಳೆ [ಮಂಗಳವಾರ] ಬೆಳಗ್ಗೆ ವೇಳೆಗೆ ಡಿಸ್ಚಾರ್ಜ್ ಆಗುತ್ತಾರೆ ಎಂದು ಸೃಜನ್ ಮಾಹಿತಿ ನೀಡಿದರು.

 ಸೋಮವಾರ ನಸುಕಿನ ವೇಳೆ ಮೈಸೂರು ಬಳಿ ದರ್ಶನ್ ಅವರ ಕಾರು ಅಪಘಾತಕ್ಕೀಡಾಗಿತ್ತು. ಈ ವೇಳೆ ದರ್ಶನ್, ಪ್ರಜ್ವಲ್ ದೇವರಾಜ್ ಹಾಗೂ ದೇವರಾಜ್ ಗಾಯಗೊಂಡಿದ್ದು, ಕೋಲಂಬಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ, ಅಪಘಾತಕ್ಕೀಡಾದ ದರ್ಶನ್ ಅವರ ಕಾರ್ ಹಿಂದೆ ಹಲವು ಅನುಮಾನಗಳು ಹುಟ್ಟಿಕೊಂಡಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗೃಹಸಚಿವರು ಏನು ಬೇಕಾದ್ರೂ ಮಾಡಬಹುದು, ಅವರ ಕಣ್ಣುಗಳನ್ನು ನೋಡಿದರೆ ನನಗೆ ಭಯವಾಗುತ್ತೆ: ಮಮತಾ ಬ್ಯಾನರ್ಜಿ
ಅಣ್ಣಾ ಹಜಾರೆ ಮತ್ತೆ ಉಪವಾಸ ಸತ್ಯಾಗ್ರಹ ಘೋಷಣೆ: ಸ್ಥಳ, ದಿನಾಂಕ ನಿಗದಿ, ಕಾರಣವೇನು ಗೊತ್ತಾ?