
ಮೈಸೂರು(ಸೆ.24): ನಗರದಲ್ಲಿ ಇಂದಿನಿಂದ ಆರಂಭವಾದ ಶಾಪಿಂಗ್ ಫೆಸ್ಟಿವಲ್'ಗೆ ಸ್ಯಾಂಡಲ್'ವುಡ್ ನಟಿಯರು ಶಾಪಿಂಗ್ ಮಾಡಿ ರಂಗು ತುಂಬಿದರು.
ನಟಿ ಶೃತಿ, ಶ್ವೇತಾ ಶ್ರೀವಾತ್ಸವ ಹಾಗೂ ಅಮೃತ ಫೆಸ್ಟಿವಲ್'ನ ಸುತ್ತಲೂ ಅಡ್ಡಾಡಿ ತರಕಾರಿ ಸೇರಿದಂತೆ ಹಲವು ರೀತಿಯ ವಸ್ತುಗಳನ್ನು ಖರೀದಿಸಿದರು. ಜೊತೆಗೆ ಮಾರಾಟಗಾರರ ಕಷ್ಟಸುಖಗಳನ್ನು ಹಂಚಿಕೊಂಡರು.
ಈ ಸಂದರ್ಭದಲ್ಲಿ ಮಾತನಾಡಿದ ನಟಿ ಶ್ವೇತಾ ಶ್ರೀವಾತ್ಸವ,ಕಾವೇರಿ ವಿಚಾರದಲ್ಲಿ ರಾಜ್ಯ ಸರ್ಕಾರ ಎಂದಿಗೂ ಎಂದೆಂದಿಗೂ ಇದೇ ರೀತಿಯ ಧೃಡ ನಿರ್ಧಾರ ತೆಗೆದುಕೊಳ್ಳಬೇಕು.ರಾಜಕಾರಣಿಗಳು ಕಾವೇರಿ ವಿಚಾರದಲ್ಲಿ ರಾಜಕಾರಣ ಮಾಡದಂತೆ ಮನವಿ ಮಾಡಿದರು.
ಮೈಸೂರಿನ ಮಹಾತ್ಮಗಾಂಧಿ ರಸ್ತೆಯ ತರಕಾರಿ ಮಾರುಕಟ್ಟೆಯಲ್ಲಿ ರೈತರಿಂದ ತರಕಾರಿ ಖರೀದಿ ಮಾಡುವ ಮೂಲಕ ನಟಿಯರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು
ನಟಿ ಶೃತಿ ರೈತರೊಂದಿಗೆ ಬೆರೆತು, ಅವರ ಕಷ್ಟಗಳನ್ನ ಕೇಳುವ ಮೂಲಕ ಸ್ಪಂದಿಸಿದರು. ಇವರಿಗೆ ಶ್ರೀವಾತ್ಸವ ಹಾಗೂ ಅಮೃತಾ ಜೊತೆಯಾದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.