ಮಾಧುರಿ ದೀಕ್ಷಿತ್ ಗೆ ಬಿಜೆಪಿ ಟಿಕೆಟ್

Published : Jun 07, 2018, 03:59 PM IST
ಮಾಧುರಿ ದೀಕ್ಷಿತ್ ಗೆ ಬಿಜೆಪಿ ಟಿಕೆಟ್

ಸಾರಾಂಶ

2019 ರ ಲೋಕಸಭಾ ಚುನಾವಣೆ ವೇಳೆ ಮತ್ತೆ ಶಿವಸೇನೆ ಜೊತೆ ಮೈತ್ರಿ ಮಾಡಿಕೊಳ್ಳುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಯೋಜನೆ ಶುಭಾರಂಗವಾಗಿದೆ. 

ಮುಂಬೈ: 2019 ರ ಲೋಕಸಭಾ ಚುನಾವಣೆ ವೇಳೆ ಮತ್ತೆ ಶಿವಸೇನೆ ಜೊತೆ ಮೈತ್ರಿ ಮಾಡಿಕೊಳ್ಳುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಯೋಜನೆ ಶುಭಾರಂಗವಾಗಿದೆ. ಸಮರ್ಥನೆಗಾಗಿ ಸಂಪರ್ಕ ಅಭಿಯಾನದ ಅಂಗವಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಬುಧವಾರ ಸಂಜೆ ಅಮಿತ್ ಶಾ ಅವರು ಶಿವಸೇನೆ ಅಧ್ಯಕ್ಷ ಉದ್ಧವ್ ಠಾಕ್ರೆ ಅವರನ್ನು ಭೇಟಿ ಮಾಡಿ ಮೋದಿ ಸರ್ಕಾರದ 4 ವರ್ಷಗಳ ಸಾಧನೆ ಬಗ್ಗೆ ಮನವರಿಕೆ ಮಾಡಿಕೊಟ್ಟರು. 

ಸುಮಾರು 2 ತಾಸುಗಳ ಕಾಲ ಉಭಯರು ಆಪ್ತ ಸಮಾಲೋಚನೆ ನಡೆಸಿದ್ದು, ಮಾತುಕತೆ ಫಲಪ್ರದವಾಗಿದೆ ಎಂದು ಬಿಜೆಪಿ ಮೂಲಗಳು ಹೇಳಿವೆ. ಹೀಗಾಗಿ ಮುಂದಿನ ದಿನಗಳಲ್ಲಿ ಉಭಯ ನಾಯಕರು ಇನ್ನೂ 2 - 3 ಬಾರಿ ಭೇಟಿಯಾಗಿ ಮಾತುಕತೆ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ. 

ವಿಶೇಷವೆಂದರೆ ಬುಧವಾರ ಪ್ರಕಟವಾದ ಶಿವಸೇನೆ ಮುಖವಾಣಿ ಸಾಮ್ನಾದಲ್ಲಿ, 2019ರ ಲೋಕಸಭಾ ಚುನಾವಣೆಯಲ್ಲಿ ಪಕ್ಷ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಹೇಳಿತ್ತು. ಇದಕ್ಕೂ ಮೊದಲು ಶಾ, ಉದ್ಯಮಿ ರತನ್ ಟಾಟಾ ಮತ್ತು ನಟಿ ಮಾಧುರಿ ದೀಕ್ಷಿತ್ ಅವರನ್ನು ಭೇಟಿಯಾಗಿ ಸರ್ಕಾರದ ಸಾಧನೆಯ ಮಾಹಿತಿ ನೀಡಿದರು. ಈ ವೇಳೆ ಅವರಿಗೆ ರಾಜ್ಯಸಭೆಯ ಟಿಕೆಟ್ ನೀಡುವ ಕುರಿತು ಶಾ ಆಫರ್ ನೀಡಿದರು ಎಂದು ಹೇಳಲಾಗಿದೆ. ಆದರೆ ಲತಾ ಮಂಗೇಶ್ಕರ್ ಅನಾರೋಗ್ಯದಿಂದ ಬಳಲುತ್ತಿರುವ ಕಾರಣ ಅವರೊಂದಿಗೆ ಭೇಟಿ ಸಾಧ್ಯವಾಗಲಿಲ್ಲ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

8ನೇ ಕ್ಲಾಸ್ ಹುಡುಗಿ ಮೇಲೆ ಬಲತ್ಕಾರ, ಬೆದರಿಸಿ ಚಿನ್ನ ದೋಚಿದ್ದ 10ನೇ ಕ್ಲಾಸ್ ಹುಡುಗ ಅರೆಸ್ಟ್
ಬಿಜೆಪಿ ನಾಯಕನ ಸಂಬಂಧಿ 17ರ ಯುವಕನಿಗೆ ಚೂರಿ ಇರಿದು ಕೊಂದ ದುಷ್ಕರ್ಮಿಗಳು!