
ಚಿತ್ರನಟಿ, ನಿರ್ದೇಶಕಿ, ಬರಹಗಾರ್ತಿ ರೂಪ ಅಯ್ಯರ್ ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆಯಿದೆ ಎಂಬ ಸುದ್ದಿ ಹರಿದಾಡುತ್ತಿದೆ. ಬೆಂಗಳೂರಿನ ಶಾಂತಿನಗರ ಕ್ಷೇತ್ರದಿಂದ ಸ್ಪರ್ಧಿಸಲಿದ್ದು ಈಗಾಗಲೇ ಹಲವು ಬಿಜೆಪಿ ಮುಖಂಡರನ್ನು ಭೇಟಿ ಮಾಡಿರುವ ಮಾತುಗಳು ಕೇಳಿಬರುತ್ತಿವೆ.
ಆದರೆ ಮಾಜಿ ಮೇಯರ್ ಕೆ. ವೆಂಕಟೇಶ್ ಮೂರ್ತಿ ಈ ಬಾರಿ ಸ್ಪರ್ಧಿಸುವುದು ಬಹುತೇಕ ಹೆಚ್ಚಿದೆ. ಕಳೆದ ಬಾರಿ ಬಿಜೆಪಿಯಿಂದ ಸ್ಪರ್ಧಿಸಿ 3ನೇ ಸ್ಥಾನ ಪಡೆದುಕೊಂಡಿದ್ದರು. ಪ್ರಸ್ತುತ ಶಾಂತಿನಗರವನ್ನು ಎನ್.ಎ.ಹ್ಯಾರಿಸ್ ಪ್ರತಿನಿಧಿಸುತ್ತಿದ್ದಾರೆ. 2ನೇ ಸ್ಥಾನವನ್ನು ಜೆಡಿಎಸ್'ನಿಂದ ಸ್ಪರ್ಧಿಸಿದ್ದ ಕೆ. ವಾಸುದೇವ್ ಮೂರ್ತಿ ಪಡೆದಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.