
ಬೆಂಗಳೂರು, [ನ.13]: ಸ್ಯಾಂಡಲ್ ವುಡ್ ನಲ್ಲಿ ಮೀ ಟೂ ಬಾರೀ ಬಿರುಗಾಳಿಯನ್ನೇ ಎಬ್ಬಿಸಿದ್ದು, ನಟ ಅರ್ಜುನ್ ಸರ್ಜಾ ಹಾಗೂ ನಟಿ ಶ್ರುತಿ ಹರಿಹರನ್ ನಡುವೆ ತಿಕ್ಕಾಟ ಮುಂದುವರೆದಿದೆ.
ಬೆಂಗಳೂರಿನ ಸೈಬರ್ ಠಾಣೆಯಲ್ಲಿ ದಾಖಲಾಗಿದ್ದ ಎಫ್ಐಆರ್ ರದ್ದು ಕೋರಿ ನಟಿ ಶ್ರುತಿ ಹರಿಹರನ್ ಮೆಟ್ಟಿಲೇರಿದ್ದಾರೆ. ನನ್ನ ಮೇಲೆ ದುರುದ್ದೇಶಪೂರಿತವಾಗಿ ಕೇಸ್ ದಾಖಲಾಗಿಸಲಾಗಿದೆ.
ಇದ್ರಿಂದ ನನ್ನ ಮೇಲಿನ ದೂರನ್ನ ರದ್ದು ಮಾಡುವಂತೆ ಶ್ರುತಿ ಹರಿಹರನ್ ಹೈಕೋರ್ಟ್ ಗೆ ಮನವಿ ಮಾಡಿದ್ದು, ನಾಳೆ ಅಂದರೆ ಬುಧವಾರ ಹೈಕೋರ್ಟ್ ನಲ್ಲಿ ವಿಚಾರಣೆ ಬರುವ ಸಾಧ್ಯತೆ ಇದೆ.
ನಟ ಅರ್ಜುನ್ ಸರ್ಜಾ ವಿರುದ್ಧ ನಟಿ ಶ್ರುತಿ ಹರಿಹರನ್ ಮಾಡಿದ್ದ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದಂತೆ ಶ್ರುತಿ ವಿರುದ್ಧವೇ ಪ್ರಶಾಂತ್ ಸಂಬರಗಿ ಎಂಬುವರು ಸೈಬರ್ ಕ್ರೈಂ ಠಾಣೆಯಲ್ಲಿ ದಾಖಲಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.